<p><strong>ಚಿಂತಾಮಣಿ</strong>: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೆಎಸ್ಆರ್ಟಿಸಿ ಘಟಕದ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.</p>.<p>ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ಶಕುಂತಲಾ ಮಾತನಾಡಿ, ‘ಅವಿದ್ಯಾವಂತರಿಗಿಂತ ವಿದ್ಯಾವಂತರೇ ಹೆಚ್ಚು ತಂಬಾಕು ಸೇವನೆ ಮಾಡುತ್ತಿರುವುದು ಬೇಸರದ ಸಂಗತಿ’ ಎಂದು ಹೇಳಿದರು.</p>.<p>ಸಾರ್ವಜನಿಕರಲ್ಲಿ ಧೂಮಪಾನ ಮತ್ತು ತಂಬಾಕು ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಸಾರಿಗೆ ಸಂಸ್ಥೆ ಚಾಲಕರು ಮತ್ತು ನಿರ್ವಾಹಕರು ವಾಹನ ಚಾಲನೆ ಮಾಡುವಾಗ ತಮಗೆ ನಿದ್ದೆ ಬಾರದಂತೆ ತಡೆಯಲು ತಂಬಾಕನ್ನು ವ್ಯಾಪಕವಾಗಿ ಬಳಸುತ್ತಾರೆ ಎನ್ನಲಾಗುತ್ತದೆ. ಈ ಕ್ಷಣಿಕ ಹವ್ಯಾಸದಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಣಾಂತಿಕ ಕಾಯಿಲೆಗಳು ಆವರಿಸಿಕೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ತಂಬಾಕು ಹಾಗೂ ಸಿಗರೇಟ್ ಪಾಕೆಟ್ಗಳ ಮೇಲೆ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಶಾಸನಬದ್ಧ ಎಚ್ಚರಿಕೆಯನ್ನು ಸ್ಪಷ್ಟವಾಗಿ ಮುದ್ರಿಸಿದ್ದರೂ, ಓದಿಕೊಂಡವರೇ ತಂಬಾಕು ಸೇವನೆಗೆ ದಾಸರಾಗುತ್ತಿರುವುದು ದುರದೃಷ್ಟಕರ ಎಂದರು.</p>.<p>ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಸವ ಮಂಜೇಶ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಿದರು. ನಿರ್ವಾಹಕರು, ಚಾಲಕರು ಮತ್ತು ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಘಟಕದ ವ್ಯವಸ್ಥಾಪಕಿ ಸರಿತಾ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಶಿವಾನಂದ ಹಾಗೂ ಪದಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1464962819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೆಎಸ್ಆರ್ಟಿಸಿ ಘಟಕದ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.</p>.<p>ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ಶಕುಂತಲಾ ಮಾತನಾಡಿ, ‘ಅವಿದ್ಯಾವಂತರಿಗಿಂತ ವಿದ್ಯಾವಂತರೇ ಹೆಚ್ಚು ತಂಬಾಕು ಸೇವನೆ ಮಾಡುತ್ತಿರುವುದು ಬೇಸರದ ಸಂಗತಿ’ ಎಂದು ಹೇಳಿದರು.</p>.<p>ಸಾರ್ವಜನಿಕರಲ್ಲಿ ಧೂಮಪಾನ ಮತ್ತು ತಂಬಾಕು ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಸಾರಿಗೆ ಸಂಸ್ಥೆ ಚಾಲಕರು ಮತ್ತು ನಿರ್ವಾಹಕರು ವಾಹನ ಚಾಲನೆ ಮಾಡುವಾಗ ತಮಗೆ ನಿದ್ದೆ ಬಾರದಂತೆ ತಡೆಯಲು ತಂಬಾಕನ್ನು ವ್ಯಾಪಕವಾಗಿ ಬಳಸುತ್ತಾರೆ ಎನ್ನಲಾಗುತ್ತದೆ. ಈ ಕ್ಷಣಿಕ ಹವ್ಯಾಸದಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಣಾಂತಿಕ ಕಾಯಿಲೆಗಳು ಆವರಿಸಿಕೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ತಂಬಾಕು ಹಾಗೂ ಸಿಗರೇಟ್ ಪಾಕೆಟ್ಗಳ ಮೇಲೆ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಶಾಸನಬದ್ಧ ಎಚ್ಚರಿಕೆಯನ್ನು ಸ್ಪಷ್ಟವಾಗಿ ಮುದ್ರಿಸಿದ್ದರೂ, ಓದಿಕೊಂಡವರೇ ತಂಬಾಕು ಸೇವನೆಗೆ ದಾಸರಾಗುತ್ತಿರುವುದು ದುರದೃಷ್ಟಕರ ಎಂದರು.</p>.<p>ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಸವ ಮಂಜೇಶ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಿದರು. ನಿರ್ವಾಹಕರು, ಚಾಲಕರು ಮತ್ತು ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಘಟಕದ ವ್ಯವಸ್ಥಾಪಕಿ ಸರಿತಾ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಶಿವಾನಂದ ಹಾಗೂ ಪದಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1464962819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>