<p><strong>ಚಿಂತಾಮಣಿ:</strong> ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಶನಿವಾರ ತಿಪ್ಪೆ ಹಾಕುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿದೆ. ಈ ಘಟನೆಯಲ್ಲಿ 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ರಾಮಾಂಜಪ್ಪ, ನಾರಾಯಣಪ್ಪ, ವೆಂಕಟಪ್ಪ, ವೆಂಕಟರಾಜು, ನಾಗಮ್ಮ, ಗೋವಿಂದಪ್ಪ, ಲಕ್ಷ್ಮಮ್ಮ, ಹರೀಶ್ ಗಾಯಗೊಂಡವರು. </p>.<p>ಗ್ರಾಮದ ಅಖಿಲಮ್ಮ ತಮ್ಮ ಮನೆ ಸಮೀಪ ಇರುವ ತಿಪ್ಪೆ ಗುಂಡಿಯಲ್ಲಿ ಕಸ ಎಸೆಯಲು ಹೋಗಿದ್ದರು. ಈ ವೇಳೆ ಸಮೀಪವಿರುವ ಮನೆಯ ವೆಂಕಟರವಣಮ್ಮ ನಡುವೆ ಮಾತಿಗೆ ಮಾತು ನಡೆದು ಗಲಾಟೆಯಾಗಿದೆ. ನಂತರ ಇಬ್ಬರ ಪರವಾಗಿ ಅವರವರ ಕುಟುಂಬಗಳ ಸದಸ್ಯರು ಸೇರಿಕೊಂಡಿದ್ದು, ಮಾತಿನ ಚಕಮಕಿಯು ಕೈಕೈ ಮಿಲಾಯಿಸಿಕೊಂಡಿದ್ದಾರೆ. </p>.<p>ಆಸ್ಪತ್ರೆಯ ಎದುರು ರಾಮಾಂಜಪ್ಪ ಅವರ ಕಾರಿನ ಮೇಲೆ ಎದುರಾಳಿ ಕುಟುಂಬ ದಾಳಿ ಮಾಡಿದೆ ಎಂದು ಆರೋಪಿಸಲಾಗಿದೆ. </p>.<p>ಈ ಕುರಿತು ಮಾಹಿತಿ ಪಡೆದ ಗ್ರಾಮಾಂತರ ಠಾಣೆ ಪೊಲೀಸರು, ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಶನಿವಾರ ತಿಪ್ಪೆ ಹಾಕುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿದೆ. ಈ ಘಟನೆಯಲ್ಲಿ 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ರಾಮಾಂಜಪ್ಪ, ನಾರಾಯಣಪ್ಪ, ವೆಂಕಟಪ್ಪ, ವೆಂಕಟರಾಜು, ನಾಗಮ್ಮ, ಗೋವಿಂದಪ್ಪ, ಲಕ್ಷ್ಮಮ್ಮ, ಹರೀಶ್ ಗಾಯಗೊಂಡವರು. </p>.<p>ಗ್ರಾಮದ ಅಖಿಲಮ್ಮ ತಮ್ಮ ಮನೆ ಸಮೀಪ ಇರುವ ತಿಪ್ಪೆ ಗುಂಡಿಯಲ್ಲಿ ಕಸ ಎಸೆಯಲು ಹೋಗಿದ್ದರು. ಈ ವೇಳೆ ಸಮೀಪವಿರುವ ಮನೆಯ ವೆಂಕಟರವಣಮ್ಮ ನಡುವೆ ಮಾತಿಗೆ ಮಾತು ನಡೆದು ಗಲಾಟೆಯಾಗಿದೆ. ನಂತರ ಇಬ್ಬರ ಪರವಾಗಿ ಅವರವರ ಕುಟುಂಬಗಳ ಸದಸ್ಯರು ಸೇರಿಕೊಂಡಿದ್ದು, ಮಾತಿನ ಚಕಮಕಿಯು ಕೈಕೈ ಮಿಲಾಯಿಸಿಕೊಂಡಿದ್ದಾರೆ. </p>.<p>ಆಸ್ಪತ್ರೆಯ ಎದುರು ರಾಮಾಂಜಪ್ಪ ಅವರ ಕಾರಿನ ಮೇಲೆ ಎದುರಾಳಿ ಕುಟುಂಬ ದಾಳಿ ಮಾಡಿದೆ ಎಂದು ಆರೋಪಿಸಲಾಗಿದೆ. </p>.<p>ಈ ಕುರಿತು ಮಾಹಿತಿ ಪಡೆದ ಗ್ರಾಮಾಂತರ ಠಾಣೆ ಪೊಲೀಸರು, ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>