<p><strong>ಚಿಂತಾಮಣಿ:</strong> ಚಿಂತಾಮಣಿ-ಹೊಸಕೋಟೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚಿರುವುದರಿಂದ ಸಾಧ್ಯವಾದಷ್ಟು ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಸ್ತೆ ಸುಧಾರಣೆಗಾಗಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.</p>.<p>ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ತಳಗವಾರದ ಬಳಿ ಕೆಆರ್ಡಿಸಿಎಲ್ ವತಿಯಿಂದ ನಡೆಯುತ್ತಿರುವ ರಸ್ತೆ ಡಿವೈಡರ್ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p>ಕೈವಾರ ಕ್ರಾಸ್ನಲ್ಲಿ ನಾಲ್ಕು ರಸ್ತೆ ಕೂಡುವಿಕೆ ಮತ್ತು ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ಜೋಡಿ ರಸ್ತೆ ಮಾಡಲಾಗುವುದು ಎಂದರು.</p>.<p>ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೈಗಾರಿಕಾ ಪ್ರಾಂಗಣಕ್ಕೆ ಸಂಪರ್ಕ ಕಲ್ಪಿಸುವುದರಿಂದ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಅಪಘಾತಗಳಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ರಸ್ತೆಗೆ ಡಿವೈಡರ್ ಅಳವಡಿಸಲಾಗುತ್ತಿದೆ ಎಂದರು.</p>.<p>ಬೀಚಗೊಂಡನಹಳ್ಳಿ ಬಳಿ ಇರುವ ಟೋಲ್ ಪ್ಲಾಜಾವನ್ನು ನವೀಕರಣಗೊಳಿಸಲಾಗುತ್ತಿದೆ. ತೀರ ಕಿರಿದಾಗಿದ್ದ ಟೋಲ್ ಪ್ಲಾಜಾವನ್ನು ಕೋಲಾರದ ಶಾಸಕರು, ಜಿಲ್ಲಾಧಿಕಾರಿ ನೆರವಿನಿಂದ ಅಗಲೀಕರಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಹೊಸಕೋಟೆ-ಚಿಂತಾಮಣಿ ರಸ್ತೆಯನ್ನು ನಾಲ್ಕುಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಹೀಗೆ ಹಂತ ಹಂತವಾಗಿ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಚಿಂತಾಮಣಿ-ಹೊಸಕೋಟೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚಿರುವುದರಿಂದ ಸಾಧ್ಯವಾದಷ್ಟು ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಸ್ತೆ ಸುಧಾರಣೆಗಾಗಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.</p>.<p>ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ತಳಗವಾರದ ಬಳಿ ಕೆಆರ್ಡಿಸಿಎಲ್ ವತಿಯಿಂದ ನಡೆಯುತ್ತಿರುವ ರಸ್ತೆ ಡಿವೈಡರ್ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು.</p>.<p>ಕೈವಾರ ಕ್ರಾಸ್ನಲ್ಲಿ ನಾಲ್ಕು ರಸ್ತೆ ಕೂಡುವಿಕೆ ಮತ್ತು ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ಜೋಡಿ ರಸ್ತೆ ಮಾಡಲಾಗುವುದು ಎಂದರು.</p>.<p>ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೈಗಾರಿಕಾ ಪ್ರಾಂಗಣಕ್ಕೆ ಸಂಪರ್ಕ ಕಲ್ಪಿಸುವುದರಿಂದ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಅಪಘಾತಗಳಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ರಸ್ತೆಗೆ ಡಿವೈಡರ್ ಅಳವಡಿಸಲಾಗುತ್ತಿದೆ ಎಂದರು.</p>.<p>ಬೀಚಗೊಂಡನಹಳ್ಳಿ ಬಳಿ ಇರುವ ಟೋಲ್ ಪ್ಲಾಜಾವನ್ನು ನವೀಕರಣಗೊಳಿಸಲಾಗುತ್ತಿದೆ. ತೀರ ಕಿರಿದಾಗಿದ್ದ ಟೋಲ್ ಪ್ಲಾಜಾವನ್ನು ಕೋಲಾರದ ಶಾಸಕರು, ಜಿಲ್ಲಾಧಿಕಾರಿ ನೆರವಿನಿಂದ ಅಗಲೀಕರಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಹೊಸಕೋಟೆ-ಚಿಂತಾಮಣಿ ರಸ್ತೆಯನ್ನು ನಾಲ್ಕುಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಹೀಗೆ ಹಂತ ಹಂತವಾಗಿ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>