<p><strong>ಚಿಕ್ಕಬಳ್ಳಾಪುರ:</strong> ನಗರದ ಹೊರವಲಯದ ಚಿತ್ರಾವತಿಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಶನಿವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಜಾತ್ರೆಯ ಅಂಗಳದಲ್ಲಿ ಸಿದ್ಧತೆಗಳು ಜೋರಾಗಿದ್ದವು.</p>.<p>ಡಿವೈಎಸ್ಪಿ ಪ್ರಕಾಶ್, ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ದೇಗುಲದ ಆವರಣದಲ್ಲಿ ಅಲಂಕಾರ ಸಹ ಮಾಡಲಾಗಿದೆ.</p>.<p>ಗುರುವಾರದಿಂದಲೇ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಶನಿವಾರ ಬೆಳಿಗ್ಗೆ ರುದ್ರಾಭಿಷೇಕ ನಡೆಯಲಿದೆ. ಮಧ್ಯಾಹ್ನ 12.15ರಿಂದ 1.30ಕ್ಕೆ ಬ್ರಹ್ಮರಥೋತ್ಸವ ಜರುಗಲಿದೆ. ರಾತ್ರಿ ದೂಳೋತ್ಸವ ನಡೆಯಲಿದೆ.</p>.<p>ಶುಕ್ರವಾರ ಜಾತ್ರೆಯ ಅಂಗಳದಲ್ಲಿ ಆಟಿಕೆಗಳು, ಬುರುಗು, ಬತ್ತಾಸ್, ಐಸ್ಕ್ರೀಂ, ಸಿಹಿ ತಿನಿಸುಗಳ ಅಂಗಡಿಗಳು ತಲೆ ಎತ್ತಿದ್ದವು. ಮತ್ತೊಂದಿಷ್ಟು ಅಂಗಡಿಗಳು ಆರಂಭವಾಗುತ್ತಿದ್ದವು. </p>.<p>ಚಿತ್ರಾವತಿ ಜಾತ್ರೆಯಲ್ಲಿ ಜಾನುವಾರುಗಳ ಸಂತೆಗೆ ತನ್ನದೇ ಆದ ಮಹತ್ವವಿದೆ. ಜಿಲ್ಲೆಯ ವಿವಿಧ ಭಾಗಗಳ ರೈತರು ಇಲ್ಲಿಗೆ ರಾಸುಗಳನ್ನು ತರುವರು. ಆದರೆ ಈ ಬಾರಿ ರಾಸುಗಳ ಜಾತ್ರೆಗೆ ಯಾವುದೇ ಸಿದ್ಧತೆಗಳು ನಡೆದಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಹೊರವಲಯದ ಚಿತ್ರಾವತಿಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಶನಿವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಜಾತ್ರೆಯ ಅಂಗಳದಲ್ಲಿ ಸಿದ್ಧತೆಗಳು ಜೋರಾಗಿದ್ದವು.</p>.<p>ಡಿವೈಎಸ್ಪಿ ಪ್ರಕಾಶ್, ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ದೇಗುಲದ ಆವರಣದಲ್ಲಿ ಅಲಂಕಾರ ಸಹ ಮಾಡಲಾಗಿದೆ.</p>.<p>ಗುರುವಾರದಿಂದಲೇ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಶನಿವಾರ ಬೆಳಿಗ್ಗೆ ರುದ್ರಾಭಿಷೇಕ ನಡೆಯಲಿದೆ. ಮಧ್ಯಾಹ್ನ 12.15ರಿಂದ 1.30ಕ್ಕೆ ಬ್ರಹ್ಮರಥೋತ್ಸವ ಜರುಗಲಿದೆ. ರಾತ್ರಿ ದೂಳೋತ್ಸವ ನಡೆಯಲಿದೆ.</p>.<p>ಶುಕ್ರವಾರ ಜಾತ್ರೆಯ ಅಂಗಳದಲ್ಲಿ ಆಟಿಕೆಗಳು, ಬುರುಗು, ಬತ್ತಾಸ್, ಐಸ್ಕ್ರೀಂ, ಸಿಹಿ ತಿನಿಸುಗಳ ಅಂಗಡಿಗಳು ತಲೆ ಎತ್ತಿದ್ದವು. ಮತ್ತೊಂದಿಷ್ಟು ಅಂಗಡಿಗಳು ಆರಂಭವಾಗುತ್ತಿದ್ದವು. </p>.<p>ಚಿತ್ರಾವತಿ ಜಾತ್ರೆಯಲ್ಲಿ ಜಾನುವಾರುಗಳ ಸಂತೆಗೆ ತನ್ನದೇ ಆದ ಮಹತ್ವವಿದೆ. ಜಿಲ್ಲೆಯ ವಿವಿಧ ಭಾಗಗಳ ರೈತರು ಇಲ್ಲಿಗೆ ರಾಸುಗಳನ್ನು ತರುವರು. ಆದರೆ ಈ ಬಾರಿ ರಾಸುಗಳ ಜಾತ್ರೆಗೆ ಯಾವುದೇ ಸಿದ್ಧತೆಗಳು ನಡೆದಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>