ಸಚಿವ ಡಾ.ಕೆ.ಸುಧಾಕರ್, ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವರ ಉತ್ಸವ ಮೂರ್ತಿಯನ್ನು ಹೆಗಲಮೇಲೆ ಹೊತ್ತರು. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ವಾಸುದೇವ್, ತಾಲ್ಲೂಕು ಪಂಚಾಯಿತಿ
ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಮೂರ್ತಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್ ಮತ್ತಿತರರ ಗಣ್ಯರು ರಥೋತ್ಸವದಲ್ಲಿ ಭಾಗವಹಿಸಿದ್ದರು.