<p><strong>ಚೇಳೂರು:</strong> ‘ದೇಶದಲ್ಲಿ ಕೊರೊನಾ ಸೋಂಕು ಇನ್ನೂ ಕಡಿಮೆಯಾಗಿಲ್ಲ. ಹಾಗಾಗಿ, ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದ ಕಾಪಾಡಬೇಕು’ ಎಂದು ಆರಕ್ಷಕ ವೃತ್ತ ನಿರೀಕ್ಷಕ ಜಿ.ಪಿ. ರಾಜು ಸೂಚಿಸಿದರು.</p>.<p>ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಇಲ್ಲಿನ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಗರಿಕರ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಕ್ರೀದ್ ಹಬ್ಬವನ್ನು ಹಿಂದಿನ ವರ್ಷ ಶಾಂತಿಯುತವಾಗಿ ಆಚರಿಸಿದ್ದೀರಿ. ಈ ಬಾರಿಯೂ ಶಾಂತಿಯುತವಾಗಿ ಆಚರಿಸಲು ಎಲ್ಲಾ ಸಮುದಾಯದವರು ಕೈ ಜೋಡಿಸಬೇಕು ಎಂದು<br />ಹೇಳಿದರು.</p>.<p>ಈದ್ಗಾ ಮೈದಾನಗಳಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ. ತೆರೆದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದೆ. ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಮಾಡಲು ಸರ್ಕಾರ ಆದೇಶ ನೀಡುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಪಾಲಿಸಬೇಕಾಗಿದೆ ಎಂದರು.</p>.<p>ಕೊರೊನಾ ಸಂಕಷ್ಟದ ಸಂದರ್ಭ ಇದಾಗಿದೆ. ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಅದಕ್ಕಾಗಿ ಮುಸ್ಲಿಂ ಮೌಲ್ವಿ ಅಥವಾ ಧರ್ಮಗುರುಗಳಿಂದ ಒಂದು ವಿಡಿಯೊ ಮಾಡಿಸಿ ಎಲ್ಲಾ ಕಡೆಗಳಲ್ಲಿಯೂ ಪ್ರಸಾರ ಆಗುವಂತೆ ಮಾಡಬೇಕು.</p>.<p>ಹಬ್ಬದ ಸಂದರ್ಭದಲ್ಲಿ ಪ್ರಚೋದನಾಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ನಾಗರಿಕರ ಹಿತ ಕಾಪಾಡುವುದು, ಶಾಂತಿ, ಸುವ್ಯವಸ್ಥೆ ಪಾಲನೆಯು ಪ್ರತಿಯೊಬ್ಬರ ಜವಾಬ್ದಾರಿ. ಸಣ್ಣಪುಟ್ಟ ಅಹಿತಕರ ಘಟನೆ ನಡೆದರೂ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕೋರಿದರು.</p>.<p>ಹಬ್ಬಕ್ಕೂ ಮುನ್ನ ಮಸೀದಿಗಳ ಹತ್ತಿರ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ರಸ್ತೆ ಬದಿಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು ಎಂದು ಮುಖಂಡರು ಮನವಿ ಮಾಡಿದರು.</p>.<p>ಜಾಮೀಯಾ ಮಸೀದಿ ಅಧ್ಯಕ್ಷ ಎಂ.ಎಸ್. ಅಬ್ದುಲ್ ಲತೀಫ್ ಮಾತನಾಡಿ, ಸರ್ಕಾರದ ನಿಯಮ ಪಾಲಿಸಿ ಹಬ್ಬ ಆಚರಿಸಲು ನಮ್ಮೆಲ್ಲರ ಸಹಕಾರವಿದೆ. ಕೊರೊನಾ ಸಂದರ್ಭ ಇದಾಗಿದೆ. ಬಹಳಷ್ಟು ಕಟ್ಟುನಿಟ್ಟಾಗಿ ನಡೆದುಕೊಳ್ಳುತ್ತೇವೆ. ಆ ಮೂಲಕ ಸರಳವಾಗಿ ಹಬ್ಬ ಆಚರಿಸುತ್ತೇವೆ ಎಂದರು.</p>.<p>ಸಭೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರತಾಪ್, ಬಾಗೇಪಲ್ಲಿ ಎಎಸ್ಐ ವೆಂಕಟರಮಣಪ್ಪ, ದೋಣಿಮೂರ್ತಿ, ಹೆಡ್ ಕಾನ್ಸ್ಟೆಬಲ್ಗಳಾದ ಟಿ.ಎಲ್. ಅಂಜಿನಪ್ಪ, ವಿದ್ಯಾದರ್, ಮುಸ್ಲಿಂ ಮುಖಂಡರಾದ ಅಲಿಂ ಬಾಷಾ, ಚಾಂದ್ ಬಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ‘ದೇಶದಲ್ಲಿ ಕೊರೊನಾ ಸೋಂಕು ಇನ್ನೂ ಕಡಿಮೆಯಾಗಿಲ್ಲ. ಹಾಗಾಗಿ, ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದ ಕಾಪಾಡಬೇಕು’ ಎಂದು ಆರಕ್ಷಕ ವೃತ್ತ ನಿರೀಕ್ಷಕ ಜಿ.ಪಿ. ರಾಜು ಸೂಚಿಸಿದರು.</p>.<p>ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಇಲ್ಲಿನ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಗರಿಕರ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಕ್ರೀದ್ ಹಬ್ಬವನ್ನು ಹಿಂದಿನ ವರ್ಷ ಶಾಂತಿಯುತವಾಗಿ ಆಚರಿಸಿದ್ದೀರಿ. ಈ ಬಾರಿಯೂ ಶಾಂತಿಯುತವಾಗಿ ಆಚರಿಸಲು ಎಲ್ಲಾ ಸಮುದಾಯದವರು ಕೈ ಜೋಡಿಸಬೇಕು ಎಂದು<br />ಹೇಳಿದರು.</p>.<p>ಈದ್ಗಾ ಮೈದಾನಗಳಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ. ತೆರೆದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದೆ. ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಮಾಡಲು ಸರ್ಕಾರ ಆದೇಶ ನೀಡುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಪಾಲಿಸಬೇಕಾಗಿದೆ ಎಂದರು.</p>.<p>ಕೊರೊನಾ ಸಂಕಷ್ಟದ ಸಂದರ್ಭ ಇದಾಗಿದೆ. ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಅದಕ್ಕಾಗಿ ಮುಸ್ಲಿಂ ಮೌಲ್ವಿ ಅಥವಾ ಧರ್ಮಗುರುಗಳಿಂದ ಒಂದು ವಿಡಿಯೊ ಮಾಡಿಸಿ ಎಲ್ಲಾ ಕಡೆಗಳಲ್ಲಿಯೂ ಪ್ರಸಾರ ಆಗುವಂತೆ ಮಾಡಬೇಕು.</p>.<p>ಹಬ್ಬದ ಸಂದರ್ಭದಲ್ಲಿ ಪ್ರಚೋದನಾಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ನಾಗರಿಕರ ಹಿತ ಕಾಪಾಡುವುದು, ಶಾಂತಿ, ಸುವ್ಯವಸ್ಥೆ ಪಾಲನೆಯು ಪ್ರತಿಯೊಬ್ಬರ ಜವಾಬ್ದಾರಿ. ಸಣ್ಣಪುಟ್ಟ ಅಹಿತಕರ ಘಟನೆ ನಡೆದರೂ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕೋರಿದರು.</p>.<p>ಹಬ್ಬಕ್ಕೂ ಮುನ್ನ ಮಸೀದಿಗಳ ಹತ್ತಿರ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ರಸ್ತೆ ಬದಿಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು ಎಂದು ಮುಖಂಡರು ಮನವಿ ಮಾಡಿದರು.</p>.<p>ಜಾಮೀಯಾ ಮಸೀದಿ ಅಧ್ಯಕ್ಷ ಎಂ.ಎಸ್. ಅಬ್ದುಲ್ ಲತೀಫ್ ಮಾತನಾಡಿ, ಸರ್ಕಾರದ ನಿಯಮ ಪಾಲಿಸಿ ಹಬ್ಬ ಆಚರಿಸಲು ನಮ್ಮೆಲ್ಲರ ಸಹಕಾರವಿದೆ. ಕೊರೊನಾ ಸಂದರ್ಭ ಇದಾಗಿದೆ. ಬಹಳಷ್ಟು ಕಟ್ಟುನಿಟ್ಟಾಗಿ ನಡೆದುಕೊಳ್ಳುತ್ತೇವೆ. ಆ ಮೂಲಕ ಸರಳವಾಗಿ ಹಬ್ಬ ಆಚರಿಸುತ್ತೇವೆ ಎಂದರು.</p>.<p>ಸಭೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರತಾಪ್, ಬಾಗೇಪಲ್ಲಿ ಎಎಸ್ಐ ವೆಂಕಟರಮಣಪ್ಪ, ದೋಣಿಮೂರ್ತಿ, ಹೆಡ್ ಕಾನ್ಸ್ಟೆಬಲ್ಗಳಾದ ಟಿ.ಎಲ್. ಅಂಜಿನಪ್ಪ, ವಿದ್ಯಾದರ್, ಮುಸ್ಲಿಂ ಮುಖಂಡರಾದ ಅಲಿಂ ಬಾಷಾ, ಚಾಂದ್ ಬಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>