ಆಗ ಸಚಿವರು ಸಮಸ್ಯೆ ಇರುವ ಕಡೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರು ಒಂದು ವಾರದೊಳಗೆ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಆದರೆ, ನಗರದಲ್ಲಿ ನೀರಿನ ಸಮಸ್ಯೆ ಮಾತ್ರ ಈವರೆಗೆ ಪರಿಹಾರವಾಗಲೇ ಇಲ್ಲ ಎಂಬುದು ಸ್ಥಳೀಯ ನಾಗರಿಕರ ಆರೋಪ.