ಕಳೆದ ನಾಲ್ಕೈದು ದಿನಗಳಿಂದ ಸುಧಾಕರ್ ಅವರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಿದಾಡುತ್ತಲೇ ಇತ್ತು. ಆದರೆ ಈ ಕುರಿತು ಸುಧಾಕರ್ ಅವರು ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ. ಬದಲು ಮಾಧ್ಯಮದವರಿಂದ ಅಂತರ ಕಾಯ್ದುಕೊಂಡಿದ್ದಾರೆ. ರಾಜೀನಾಮೆ ವದಂತಿ ಬಗ್ಗೆ ಮೌನ ಮುರಿಯದ ಸುಧಾಕರ್ ಅವರ ನಡೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಜ್ವರದ ನೆಪದಲ್ಲಿ ದಿನವೀಡಿ ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿಯೇ ಉಳಿದ ಸುಧಾಕರ್ ಅವರು ಹೊರಗಡೆ ಕಾಣಿಸಿಕೊಳ್ಳಲಿಲ್ಲ.