<p><strong>ಗೌರಿಬಿದನೂರು:</strong> ನಗರದ ಇಡಗೂರು ರಸ್ತೆಯ ವೀರಂಡಹಳ್ಳಿ ಬಳಿ ಕಸ ಹಾಕುವ ಬ್ಲಾಕ್ಸ್ಪಾಟ್ಗಳಲ್ಲಿ ಮಂಗಳವಾರ ನಗರಸಭೆ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. </p>.<p>ನಗರಸಭೆ ಪೌರಾಯುಕ್ತ ಕೆ.ಜಿ. ರಮೇಶ್ ಮಾತನಾಡಿ, ‘ನಗರವನ್ನು ಸುಂದರವಾಗಿ ಕಾಣುವಂತೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ಹೇಳಿದರು. </p>.<p>ಕೆಲವರು ಮನೆಯಲ್ಲಿನ ಕಸವನ್ನು ನಗರಸಭೆ ವಾಹನಕ್ಕೆ ನೀಡದೆ, ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ತಂದು ಸುರಿಯುತ್ತಿದ್ದಾರೆ. ಇಂತಹ ಬ್ಲಾಕ್ಸ್ಪಾಟ್ಗಳನ್ನು ಗುರುತು ಮಾಡಿ, ರಂಗೋಲಿ ಹಾಕಿ, ಹೂವಿನ ಗಿಡಗಳನ್ನು ನೆಟ್ಟು, ಇಲ್ಲಿ ಯಾರು ಕಸ ಹಾಕಬಾರದು ಎಂದು ನಾಮಫಲಕ ಅಳವಡಿಸಲಾಗುತ್ತಿದೆ ಎಂದು ಹೇಳಿದರು. </p>.<p>ಕೆಲವು ಜಾಗಗಳಲ್ಲಿ ಜನರಿಗೆ ನಗರಸಭೆ ಕಸದ ವಾಹನಕ್ಕೆ ಹಸಿ ಮತ್ತು ಒಣ ಕಸವನ್ನು ನೀಡಬೇಕು ಎಂದು ಎಷ್ಟೇ ಮನವಿ ಮಾಡಿದರೂ ರಸ್ತೆ ಬದಿಯೇ ತಂದು ಸುರಿಯುತ್ತಿದ್ದಾರೆ. ಇಂತಹ ಸ್ಥಳಗಳನ್ನು ನಗರಸಭೆಯಿಂದ ಅಂದಗೊಳಿಸುವ ಕೆಲಸ ಮಾಡಲಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.</p>.<p>ಪ್ರಜ್ಞಾವಂತ ಜನರು ಹಸಿ ಮತ್ತು ಒಣಕಸ ವಿಂಗಡಿಸಿ ನಗರಸಭೆ ವಾಹನಗಳಿಗೆ ನೀಡುತ್ತಿದ್ದಾರೆ. ಪೌರ ಕಾರ್ಮಿಕರು ಮನೆ ಮನೆಗೆ ತೆರಳಿ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದರು. </p>.<p>ಇದೇ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರ ಶಿವಶಂಕರ್, ಆರೋಗ್ಯ ನಿರೀಕ್ಷಕ, ನವೀನ್, ಶ್ವೇತಾ, ಸಣ್ಣ ಮೀರ್, ನಗರಸಭೆ ಸಿಬ್ಬಂದಿ ಹಾಗೂ ವಾರ್ಡ್ ನಿವಾಸಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಇಡಗೂರು ರಸ್ತೆಯ ವೀರಂಡಹಳ್ಳಿ ಬಳಿ ಕಸ ಹಾಕುವ ಬ್ಲಾಕ್ಸ್ಪಾಟ್ಗಳಲ್ಲಿ ಮಂಗಳವಾರ ನಗರಸಭೆ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. </p>.<p>ನಗರಸಭೆ ಪೌರಾಯುಕ್ತ ಕೆ.ಜಿ. ರಮೇಶ್ ಮಾತನಾಡಿ, ‘ನಗರವನ್ನು ಸುಂದರವಾಗಿ ಕಾಣುವಂತೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ಹೇಳಿದರು. </p>.<p>ಕೆಲವರು ಮನೆಯಲ್ಲಿನ ಕಸವನ್ನು ನಗರಸಭೆ ವಾಹನಕ್ಕೆ ನೀಡದೆ, ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ತಂದು ಸುರಿಯುತ್ತಿದ್ದಾರೆ. ಇಂತಹ ಬ್ಲಾಕ್ಸ್ಪಾಟ್ಗಳನ್ನು ಗುರುತು ಮಾಡಿ, ರಂಗೋಲಿ ಹಾಕಿ, ಹೂವಿನ ಗಿಡಗಳನ್ನು ನೆಟ್ಟು, ಇಲ್ಲಿ ಯಾರು ಕಸ ಹಾಕಬಾರದು ಎಂದು ನಾಮಫಲಕ ಅಳವಡಿಸಲಾಗುತ್ತಿದೆ ಎಂದು ಹೇಳಿದರು. </p>.<p>ಕೆಲವು ಜಾಗಗಳಲ್ಲಿ ಜನರಿಗೆ ನಗರಸಭೆ ಕಸದ ವಾಹನಕ್ಕೆ ಹಸಿ ಮತ್ತು ಒಣ ಕಸವನ್ನು ನೀಡಬೇಕು ಎಂದು ಎಷ್ಟೇ ಮನವಿ ಮಾಡಿದರೂ ರಸ್ತೆ ಬದಿಯೇ ತಂದು ಸುರಿಯುತ್ತಿದ್ದಾರೆ. ಇಂತಹ ಸ್ಥಳಗಳನ್ನು ನಗರಸಭೆಯಿಂದ ಅಂದಗೊಳಿಸುವ ಕೆಲಸ ಮಾಡಲಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.</p>.<p>ಪ್ರಜ್ಞಾವಂತ ಜನರು ಹಸಿ ಮತ್ತು ಒಣಕಸ ವಿಂಗಡಿಸಿ ನಗರಸಭೆ ವಾಹನಗಳಿಗೆ ನೀಡುತ್ತಿದ್ದಾರೆ. ಪೌರ ಕಾರ್ಮಿಕರು ಮನೆ ಮನೆಗೆ ತೆರಳಿ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದರು. </p>.<p>ಇದೇ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರ ಶಿವಶಂಕರ್, ಆರೋಗ್ಯ ನಿರೀಕ್ಷಕ, ನವೀನ್, ಶ್ವೇತಾ, ಸಣ್ಣ ಮೀರ್, ನಗರಸಭೆ ಸಿಬ್ಬಂದಿ ಹಾಗೂ ವಾರ್ಡ್ ನಿವಾಸಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>