<p><strong>ಚಿಕ್ಕಬಳ್ಳಾಪುರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಬುಧವಾರ ಪಿಎಂ–ಕುಸುಮ್ ‘ಸಿ’ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ಘಟಕ ಲೋಕಾರ್ಪಣೆಗೊಳಿಸಿದರು.</p>.<p>ನಂತರ ಗೌರಿಬಿದನೂರಿನಲ್ಲಿ ನಡೆದ ರಾಜ್ಯ ಮಟ್ಟದ ಈ ಕಾರ್ಯಕ್ರಮದಲ್ಲಿ ಗದಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಸೋಲಾರ್ ಘಟಕಗಳನ್ನೂ ಆನ್ಲೈನ್ ಮೂಲಕ ಉದ್ಘಾಟಿಸಿದರು. ಈ ಮೂರು ಜಿಲ್ಲೆಗಳ ರೈತರು ಮತ್ತು ಜನಪ್ರತಿನಿಧಿಗಳು ಮುಖ್ಯಮಂತ್ರಿ ಜತೆ ಸಂವಾದ ನಡೆಸಿದರು.</p>.<p>ಸಂವಾದದ ವೇಳೆ ಮುಖ್ಯಮಂತ್ರಿ, ‘ಕುಸುಮ್ ‘ಸಿ’ ಯೋಜನೆಯಲ್ಲಿ ಕೇಂದ್ರದ ಪಾಲು ಶೇ30, ರಾಜ್ಯದ ಪಾಲು ಶೇ50 ಮತ್ತು ಹೂಡಿಕೆದಾರರ ಪಾಲು ಶೇ20. ಆದರೂ, ಕೇಂದ್ರ ಸರ್ಕಾರ ಇದು ನನ್ನ ಯೋಜನೆ ಎನ್ನುತ್ತಿದೆ. 2021ರಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿ ಆಗಬೇಕಾಗಿತ್ತು. ಆದರೆ, ಅಂದಿನ ಬಿಜೆಪಿ ಸರ್ಕಾರವೇ ಜಾರಿಗೊಳಿಸಲಿಲ್ಲ. ಬಿಜೆಪಿ ರೈತರ ಪರವಾಗಿ ಇದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸುತ್ತಿತ್ತು. ಒಂದು ಯುನಿಟ್ ವಿದ್ಯುತ್ ಸಹ ಅವರು ಉತ್ಪಾದಿಸಲಿಲ್ಲ. ನಾವು ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆ ಅನುಷ್ಠಾನಗೊಳಿಸಿದ್ದೇವೆ. ರೈತರ ಪರ ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಒತ್ತಿ ಹೇಳಿದರು. </p>.<p>ಸಂವಾದದಲ್ಲಿ ಪಾಲ್ಗೊಂಡಿದ್ದ ಗದಗ ಜಿಲ್ಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಸ್.ವಿ.ಸಂಕನೂರ, ‘ನಮ್ಮ ಸರ್ಕಾರವೂ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ. ಆದರೆ, ನೀವು ಅನುಷ್ಠಾನಗೊಳಿಸಿದ್ದೀರಿ. ನಾವು ಏನು ಮಾಡಿಲ್ಲ ಎನ್ನಬೇಡಿ ಸರ್. ನಮ್ಮ ಕೊಡುಗೆಯೂ ಯೋಜನೆ ಅನುಷ್ಠಾನಕ್ಕೆ ಇದೆ’ ಎಂದರು.</p>.<p>ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಸೋಲಾರ್ ಘಟಕ ಅಳವಡಿಸಲು ಖಾಸಗಿಯವರಿಂದ ಗುತ್ತಿಗೆ ಪಡೆಯುತ್ತಿರುವ ಜಮೀನಿಗೆ ವಾರ್ಷಿಕ ₹25 ಸಾವಿರ ಬಾಡಿಗೆ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಬೇಕು ಎಂದು ಕೋರಿದರು. ಆಗ ಮುಖ್ಯಮಂತ್ರಿ ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋಣ ಎಂದರು. ತಿಪಟೂರು ಶಾಸಕ ಕೆ.ಷಡಕ್ಷರಿ ಸಹ ಸಂವಾದದಲ್ಲಿ ಭಾಗಿಯಾಗಿದ್ದರು.</p>.<p>60 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ: ‘ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 4 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಹೆಚ್ಚಿಸಿದೆ. ಈಗ ರಾಜ್ಯದಲ್ಲಿ 30 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷದಲ್ಲಿ 60 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದಿಸುತ್ತೇವೆ’ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕುಸುಮ್ ‘ಸಿ’ ಯೋಜನೆ ಮೂಲಕ 2,400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಇದರಿಂದ ರೈತರ ಕೃಷಿ ಪಂಪ್ಸೆಟ್ಗಳಿಗೆ ಬೆಳಗ್ಗಿನ ಸಮಯದಲ್ಲಿಯೇ 7 ತಾಸು ವಿದ್ಯುತ್ ನೀಡಲಾಗುವುದು ಎಂದರು. </p>.<p>‘ನಮ್ಮ ಸರ್ಕಾರ ಪ್ರತಿವರ್ಷ ಇಂಧನ ಇಲಾಖೆ ಮೂಲಕ ರೈತರ ಕೃಷಿ ಪಂಪ್ಸೆಟ್ಗಳಿಗೆ ₹19,000 ಕೋಟಿ ಸಹಾಯಧನ ನೀಡುತ್ತಿದೆ’ ಎಂದು ತಿಳಿಸಿದರು.</p>.<p>* ಆನ್ಲೈನ್ ಮೂಲಕ ಗದಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಸೋಲಾರ್ ಘಟಕಗಳ ಉದ್ಘಾಟನೆ</p><p>* ಕುಸುಮ್ ‘ಸಿ’ ಯೋಜನೆ ಮೂಲಕ 2,400 ಮೆಗಾವಾಟ್ ವಿದ್ಯುತ್ ಉತ್ಪಾದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಬುಧವಾರ ಪಿಎಂ–ಕುಸುಮ್ ‘ಸಿ’ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ಘಟಕ ಲೋಕಾರ್ಪಣೆಗೊಳಿಸಿದರು.</p>.<p>ನಂತರ ಗೌರಿಬಿದನೂರಿನಲ್ಲಿ ನಡೆದ ರಾಜ್ಯ ಮಟ್ಟದ ಈ ಕಾರ್ಯಕ್ರಮದಲ್ಲಿ ಗದಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಸೋಲಾರ್ ಘಟಕಗಳನ್ನೂ ಆನ್ಲೈನ್ ಮೂಲಕ ಉದ್ಘಾಟಿಸಿದರು. ಈ ಮೂರು ಜಿಲ್ಲೆಗಳ ರೈತರು ಮತ್ತು ಜನಪ್ರತಿನಿಧಿಗಳು ಮುಖ್ಯಮಂತ್ರಿ ಜತೆ ಸಂವಾದ ನಡೆಸಿದರು.</p>.<p>ಸಂವಾದದ ವೇಳೆ ಮುಖ್ಯಮಂತ್ರಿ, ‘ಕುಸುಮ್ ‘ಸಿ’ ಯೋಜನೆಯಲ್ಲಿ ಕೇಂದ್ರದ ಪಾಲು ಶೇ30, ರಾಜ್ಯದ ಪಾಲು ಶೇ50 ಮತ್ತು ಹೂಡಿಕೆದಾರರ ಪಾಲು ಶೇ20. ಆದರೂ, ಕೇಂದ್ರ ಸರ್ಕಾರ ಇದು ನನ್ನ ಯೋಜನೆ ಎನ್ನುತ್ತಿದೆ. 2021ರಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿ ಆಗಬೇಕಾಗಿತ್ತು. ಆದರೆ, ಅಂದಿನ ಬಿಜೆಪಿ ಸರ್ಕಾರವೇ ಜಾರಿಗೊಳಿಸಲಿಲ್ಲ. ಬಿಜೆಪಿ ರೈತರ ಪರವಾಗಿ ಇದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸುತ್ತಿತ್ತು. ಒಂದು ಯುನಿಟ್ ವಿದ್ಯುತ್ ಸಹ ಅವರು ಉತ್ಪಾದಿಸಲಿಲ್ಲ. ನಾವು ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆ ಅನುಷ್ಠಾನಗೊಳಿಸಿದ್ದೇವೆ. ರೈತರ ಪರ ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಒತ್ತಿ ಹೇಳಿದರು. </p>.<p>ಸಂವಾದದಲ್ಲಿ ಪಾಲ್ಗೊಂಡಿದ್ದ ಗದಗ ಜಿಲ್ಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಸ್.ವಿ.ಸಂಕನೂರ, ‘ನಮ್ಮ ಸರ್ಕಾರವೂ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ. ಆದರೆ, ನೀವು ಅನುಷ್ಠಾನಗೊಳಿಸಿದ್ದೀರಿ. ನಾವು ಏನು ಮಾಡಿಲ್ಲ ಎನ್ನಬೇಡಿ ಸರ್. ನಮ್ಮ ಕೊಡುಗೆಯೂ ಯೋಜನೆ ಅನುಷ್ಠಾನಕ್ಕೆ ಇದೆ’ ಎಂದರು.</p>.<p>ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಸೋಲಾರ್ ಘಟಕ ಅಳವಡಿಸಲು ಖಾಸಗಿಯವರಿಂದ ಗುತ್ತಿಗೆ ಪಡೆಯುತ್ತಿರುವ ಜಮೀನಿಗೆ ವಾರ್ಷಿಕ ₹25 ಸಾವಿರ ಬಾಡಿಗೆ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಬೇಕು ಎಂದು ಕೋರಿದರು. ಆಗ ಮುಖ್ಯಮಂತ್ರಿ ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋಣ ಎಂದರು. ತಿಪಟೂರು ಶಾಸಕ ಕೆ.ಷಡಕ್ಷರಿ ಸಹ ಸಂವಾದದಲ್ಲಿ ಭಾಗಿಯಾಗಿದ್ದರು.</p>.<p>60 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ: ‘ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 4 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಹೆಚ್ಚಿಸಿದೆ. ಈಗ ರಾಜ್ಯದಲ್ಲಿ 30 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷದಲ್ಲಿ 60 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದಿಸುತ್ತೇವೆ’ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕುಸುಮ್ ‘ಸಿ’ ಯೋಜನೆ ಮೂಲಕ 2,400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಇದರಿಂದ ರೈತರ ಕೃಷಿ ಪಂಪ್ಸೆಟ್ಗಳಿಗೆ ಬೆಳಗ್ಗಿನ ಸಮಯದಲ್ಲಿಯೇ 7 ತಾಸು ವಿದ್ಯುತ್ ನೀಡಲಾಗುವುದು ಎಂದರು. </p>.<p>‘ನಮ್ಮ ಸರ್ಕಾರ ಪ್ರತಿವರ್ಷ ಇಂಧನ ಇಲಾಖೆ ಮೂಲಕ ರೈತರ ಕೃಷಿ ಪಂಪ್ಸೆಟ್ಗಳಿಗೆ ₹19,000 ಕೋಟಿ ಸಹಾಯಧನ ನೀಡುತ್ತಿದೆ’ ಎಂದು ತಿಳಿಸಿದರು.</p>.<p>* ಆನ್ಲೈನ್ ಮೂಲಕ ಗದಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಸೋಲಾರ್ ಘಟಕಗಳ ಉದ್ಘಾಟನೆ</p><p>* ಕುಸುಮ್ ‘ಸಿ’ ಯೋಜನೆ ಮೂಲಕ 2,400 ಮೆಗಾವಾಟ್ ವಿದ್ಯುತ್ ಉತ್ಪಾದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>