ಸರ್ಕಾರದ ಶಿಷ್ಟಾಚಾರದಂತೆ ಸ್ಥಳೀಯ ಶಾಸಕರನ್ನು ಆಹ್ವಾನಿಸಿರಲಿಲ್ಲ. ಹಾಗಾಗಿ, ಶಾಸಕ ಎಂ. ಕೃಷ್ಣಾರೆಡ್ಡಿ ಹಕ್ಕುಚ್ಯುತಿ ಸಮಿತಿಗೆ ದೂರು ನೀಡಿದ್ದರು. ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಪೌರಾಡಳಿತ ನಿರ್ದೇಶನಾಲಯಕ್ಕೆ ಹಕ್ಕುಚ್ಯುತಿ ಸಮಿತಿ ಆದೇಶ ನೀಡಿತ್ತು. ತನಿಖೆ ನಡೆಸಿದ ಜಿಲ್ಲಾಧಿಕಾರಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದಾಗಿ ವರದಿ ಸಲ್ಲಿಸಿದ್ದರು.