ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಂಕಷ್ಟಕ್ಕೆ ನೆರವಾಗಲು ಬದ್ಧ: ಕೆ.ಎಚ್. ಪುಟ್ಟಸ್ವಾಮಿಗೌಡ

Last Updated 30 ನವೆಂಬರ್ 2020, 2:11 IST
ಅಕ್ಷರ ಗಾತ್ರ

ಗೌರಿಬಿದನೂರು: ‘ಅಧಿಕಾರ ಮತ್ತು ಹಣದಿಂದ ಮಾತ್ರ ಜನರ‌ ವಿಶ್ವಾಸ ಗಳಿಸಲು ಸಾಧ್ಯವಿಲ್ಲ. ಅವರ ಸಂಕಷ್ಟಗಳಿಗೆ ಆಸರೆಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಅವರಲ್ಲಿ ದೃಢ ನಂಬಿಕೆ ಉಳಿಸಿಕೊಂಡು ಪ್ರೀತಿ ಪಾತ್ರರಾಗಲು ಸಾಧ್ಯ’ ಎಂದು ಕೆ.ಎಚ್.ಪಿ ಫೌಂಡೇಷನ್ ಅಧ್ಯಕ್ಷ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.

ತಾಲ್ಲೂಕಿನ ‌ಚಿಕ್ಕಕುರುಗೋಡು ಗ್ರಾಮದಲ್ಲಿ ಗ್ರಾ.ಪಂ. ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಮಹಿಳೆಯರಿಗೆ ಸೀರೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಥಳೀಯ ‌ಮಟ್ಟದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಅವರ ನೋವು, ನಲಿವುಗಳಿಗೆ ಆಸರೆಯಾದರೆ ಮಾತ್ರ ಅವರ ವಿಶ್ವಾಸ ಮತ್ತು ನಂಬಿಕೆ ಪಡೆಯಲು ಸಾಧ್ಯವಾಗುತ್ತದೆ. ಈ‌ ನಿಟ್ಟಿನಲ್ಲಿ ಫೌಂಡೇಷನ್ ವತಿಯಿಂದ ಕಳೆದ ಒಂದು ವರ್ಷದಿಂದಲೂ ಇಡೀ ತಾಲ್ಲೂಕಿನಲ್ಲಿ ಸಂಚರಿಸಿ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಭಾಗಿಯಾಗಿ ಕೈಲಾದಷ್ಟು ಮಟ್ಟಿಗೆ ಜನರ ಸೇವೆ ಮಾಡಲು‌ ಮುಂದಾಗಿದ್ದೇವೆ ಎಂದರು.

ಮುಖಂಡ ಜಿ.ಕೆ. ಸತೀಶ್ ಮಾತನಾಡಿ, ‘ಪುಟ್ಟಸ್ವಾಮಿಗೌಡರು ಸದಾ ಬಡವರ, ರೈತರ ಹಾಗೂ ಕಾರ್ಮಿಕ ವರ್ಗದವರ ಹಿತ ಕಾಪಾಡಲು ಬದ್ಧರಾಗಿದ್ದಾರೆ. ಅವರ ಸೇವಾ ಮನೋಭಾವದಿಂದ ನಿಮ್ಮೆಲ್ಲರ ಹಿತವನ್ನು ಬಯಸಿ ಸಾಕಷ್ಟು ಸಮಾಜಮುಖಿ‌ ಕಾರ್ಯಗಳಿಗೆ ಮುಂದಾಗಿದ್ದಾರೆ. ಈ ಬಾರಿಯ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಜನರೊಂದಿಗೆ ಚರ್ಚಿಸಿ ಬಣದ ವತಿಯಿಂದ ಪ್ರಾಮಾಣಿಕ ಮತ್ತು ದಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗ್ರಾ.ಪಂ. ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆಯುವ ವಿಶ್ವಾಸ ನಮ್ಮಲ್ಲಿದೆ’ ಎಂದು ತಿಳಿಸಿದರು.

ಮುಖಂಡರಾದ ಸೋಮಶೇಖರರೆಡ್ಡಿ, ಶ್ರೀನಾಥ್, ಶ್ರೀನಿವಾಸಗೌಡ, ಪರೀದ್, ಅಲ್ತಾಫ್, ರವಿ, ಕೃಷ್ಣಮೂರ್ತಿ, ಅಶೋಕ್, ಸವಿತಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT