<p><strong>ಚಿಕ್ಕಬಳ್ಳಾಪುರ:</strong> ಸಮುದಾಯಗಳು ಆರ್ಥಿಕ, ಸಾಮಾಜಿಕವಾಗಿ ಏಳಿಗೆ ಆಗಬೇಕಾದರೆ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯಾವುದೇ ಸಮುದಾಯಗಳು ಏಳಿಗೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಶಿಕ್ಷಣವನ್ನೇ ಶಕ್ತಿಯನ್ನಾಗಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೂ ಸಹ ಶಿಕ್ಷಣದ ಪ್ರಾಮುಖ್ಯದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು.</p>.<p>ಕೌಶಲ ಎಂಬುದು ತಾಂತ್ರಿಕವಾಗಿ ನಿರಂತರವಾಗಿ ಬದಲಾವಣೆ ಆಗುತ್ತಿರುತ್ತದೆ. ಬದಲಾವಣೆಗೆ ತಕ್ಕಂತೆ ಹೊಂದಿಕೊಳ್ಳಬೇಕು. ವಾಸ್ತುಶಿಲ್ಪಿಗಳನ್ನು ನಿಜವಾದ ಎಂಜಿನಿಯರ್ಗಳು ಎಂದು ಕರೆಯಲಾಗುತ್ತದೆ. ದೈವಿಕ ವಾಸ್ತುಶಿಲ್ಪಿ ಮತ್ತು ಕುಶಲಕರ್ಮಿ ಎಂದು ಪರಿಗಣಿಸಲ್ಪಟ್ಟ ಭಗವಾನ್ ವಿಶ್ವಕರ್ಮರನ್ನು ಗೌರವಿಸುವ ಮಹತ್ವದ ದಿನವಾಗಿ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತದೆ ಎಂದರು.</p>.<p>ಉಪನ್ಯಾಸಕ ಪಿ.ಎಲ್. ಮುನೇಶ್ವರಾಚಾರಿ, ಬ್ರಹ್ಮ ದೇವರು ವಿಶ್ವಕರ್ಮನನ್ನು ಭೂಮಿಯ ಮೇಲೆ ಸೃಷ್ಟಿಸಿದರು. ವಿಶ್ವಕರ್ಮ ಭೂಮಿಯಲ್ಲಿನ ಅರಮನೆಗಳನ್ನು, ಮಹಲುಗಳನ್ನು, ವಾಹನಗಳನ್ನು, ಆಯುಧಗಳನ್ನು ಹಾಗೂ ಇನ್ನಿತರ ತಾಂತ್ರಿಕ ವಸ್ತುಗಳನ್ನು ನಿರ್ಮಿಸಿದರು ಎಂದರು.</p>.<p>ವಿಶ್ವಕರ್ಮರು ಇಂದ್ರಪುರಿ, ದ್ವಾರಕಾ, ಹಸ್ತಿನಾಪುರ, ಸ್ವರ್ಗಲೋಕ, ಲಂಕಾ ಇತ್ಯಾದಿಗಳನ್ನು ನಿರ್ಮಿಸಿದರು. ಆದ್ದರಿಂದ ಪ್ರತಿ ವರ್ಷ ವಿಶ್ವಕರ್ಮ ಜನ್ಮ ವಾರ್ಷಿಕೋತ್ಸವದಂದು ಉಪಕರಣಗಳನ್ನು, ಯಂತ್ರಗಳನ್ನು ಮತ್ತು ಕೈಗಾರಿಕಾ ಘಟಕಗಳನ್ನು ಪೂಜಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಚಿಕ್ಕಬಳ್ಳಾಪುರ ಜಿಲ್ಲಾ ವಿಶ್ವಕರ್ಮ ಸಂಘದ ಅಧ್ಯಕ್ಷ ಸಿ.ಬಿ ನವೀನ್ ಕುಮಾರ್, ಪದಾಧಿಕಾರಿಗಳಾದ ಬಿ.ವಿ. ಪ್ರಕಾಶ್ ಹಾಗೂ ಲಾವಣ್ಯ ಮಾತನಾಡಿದರು.</p>.<p>ಸಮುದಾಯದ ಹಿರಿಯರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.<br />ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ ರವಿಕುಮಾರ್, ಸಮುದಾಯದ ಮುಖಂಡರಾದ ರಘುನಾಥಚಾರಿ, ಮಂಜುನಾಥಚಾರಿ, ನಂಜುಂಡಾಚಾರಿ, ಬ್ರಹ್ಮಚಾರಿ, ಹರೀಶ್ ಕುಮಾರ್, ಸುಬ್ಬಲಕ್ಷ್ಮಮ್ಮ, ನರೇಂದ್ರ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಸಮುದಾಯಗಳು ಆರ್ಥಿಕ, ಸಾಮಾಜಿಕವಾಗಿ ಏಳಿಗೆ ಆಗಬೇಕಾದರೆ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯಾವುದೇ ಸಮುದಾಯಗಳು ಏಳಿಗೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಶಿಕ್ಷಣವನ್ನೇ ಶಕ್ತಿಯನ್ನಾಗಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೂ ಸಹ ಶಿಕ್ಷಣದ ಪ್ರಾಮುಖ್ಯದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು.</p>.<p>ಕೌಶಲ ಎಂಬುದು ತಾಂತ್ರಿಕವಾಗಿ ನಿರಂತರವಾಗಿ ಬದಲಾವಣೆ ಆಗುತ್ತಿರುತ್ತದೆ. ಬದಲಾವಣೆಗೆ ತಕ್ಕಂತೆ ಹೊಂದಿಕೊಳ್ಳಬೇಕು. ವಾಸ್ತುಶಿಲ್ಪಿಗಳನ್ನು ನಿಜವಾದ ಎಂಜಿನಿಯರ್ಗಳು ಎಂದು ಕರೆಯಲಾಗುತ್ತದೆ. ದೈವಿಕ ವಾಸ್ತುಶಿಲ್ಪಿ ಮತ್ತು ಕುಶಲಕರ್ಮಿ ಎಂದು ಪರಿಗಣಿಸಲ್ಪಟ್ಟ ಭಗವಾನ್ ವಿಶ್ವಕರ್ಮರನ್ನು ಗೌರವಿಸುವ ಮಹತ್ವದ ದಿನವಾಗಿ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತದೆ ಎಂದರು.</p>.<p>ಉಪನ್ಯಾಸಕ ಪಿ.ಎಲ್. ಮುನೇಶ್ವರಾಚಾರಿ, ಬ್ರಹ್ಮ ದೇವರು ವಿಶ್ವಕರ್ಮನನ್ನು ಭೂಮಿಯ ಮೇಲೆ ಸೃಷ್ಟಿಸಿದರು. ವಿಶ್ವಕರ್ಮ ಭೂಮಿಯಲ್ಲಿನ ಅರಮನೆಗಳನ್ನು, ಮಹಲುಗಳನ್ನು, ವಾಹನಗಳನ್ನು, ಆಯುಧಗಳನ್ನು ಹಾಗೂ ಇನ್ನಿತರ ತಾಂತ್ರಿಕ ವಸ್ತುಗಳನ್ನು ನಿರ್ಮಿಸಿದರು ಎಂದರು.</p>.<p>ವಿಶ್ವಕರ್ಮರು ಇಂದ್ರಪುರಿ, ದ್ವಾರಕಾ, ಹಸ್ತಿನಾಪುರ, ಸ್ವರ್ಗಲೋಕ, ಲಂಕಾ ಇತ್ಯಾದಿಗಳನ್ನು ನಿರ್ಮಿಸಿದರು. ಆದ್ದರಿಂದ ಪ್ರತಿ ವರ್ಷ ವಿಶ್ವಕರ್ಮ ಜನ್ಮ ವಾರ್ಷಿಕೋತ್ಸವದಂದು ಉಪಕರಣಗಳನ್ನು, ಯಂತ್ರಗಳನ್ನು ಮತ್ತು ಕೈಗಾರಿಕಾ ಘಟಕಗಳನ್ನು ಪೂಜಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಚಿಕ್ಕಬಳ್ಳಾಪುರ ಜಿಲ್ಲಾ ವಿಶ್ವಕರ್ಮ ಸಂಘದ ಅಧ್ಯಕ್ಷ ಸಿ.ಬಿ ನವೀನ್ ಕುಮಾರ್, ಪದಾಧಿಕಾರಿಗಳಾದ ಬಿ.ವಿ. ಪ್ರಕಾಶ್ ಹಾಗೂ ಲಾವಣ್ಯ ಮಾತನಾಡಿದರು.</p>.<p>ಸಮುದಾಯದ ಹಿರಿಯರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.<br />ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ ರವಿಕುಮಾರ್, ಸಮುದಾಯದ ಮುಖಂಡರಾದ ರಘುನಾಥಚಾರಿ, ಮಂಜುನಾಥಚಾರಿ, ನಂಜುಂಡಾಚಾರಿ, ಬ್ರಹ್ಮಚಾರಿ, ಹರೀಶ್ ಕುಮಾರ್, ಸುಬ್ಬಲಕ್ಷ್ಮಮ್ಮ, ನರೇಂದ್ರ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>