<p><strong>ಚೇಳೂರು:</strong> ಗೊಲ್ಲ ಸಮದಾಯ ಅಭಿವೃದ್ದಿ ನಿಗಮ ಸ್ಥಾಪನೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಯಾದವ ಸಂಘದ ಚೇಳೂರು ತಾಲ್ಲೂಕು ಅಧ್ಯಕ್ಷ ಮಂಡ್ಯಂಪಲ್ಲಿ ಕೆ.ಎನ್.ಚಂದ್ರಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>‘ರಾಜ್ಯದಲ್ಲಿ ಗೊಲ್ಲ ಸಮುದಾಯದ 30 ಲಕ್ಷ ಜನರಿದ್ದು, ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಸಮುದಾಯವು ಸಮಾಜದ ಮುಖ್ಯ ವಾಹಿನಿಗೆ ಬರಲು ಅನುಕೂಲವಾಗಿದೆ. ಎಂದು ಹೇಳಿದರು.</p>.<p>ಚಿಂತಾಮಣಿ: ನಗರದ ಮುನ್ಸಿಪಲ್ ಕಾಂಪ್ಲೆಕ್ಸ್ ನ ನೀರಿನ ತೊಟ್ಟಿಯ ಕೆಳಗೆ ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಗುಂಪಿನ ಮೇಲೆ ಬುಧವಾರ ಜಿಲ್ಲಾ ಡಿ.ಸಿ.ಬಿ ಪೊಲೀಸರು ದಾಳಿ ನಡೆಸಿ ಒಬ್ಬರನ್ನು ಬಂಧಿಸಿ ₹ 4,600 ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.</p>.<p>ಜಿಲ್ಲಾ ಡಿ.ಸಿ.ಬಿ ಪೊಲೀಸ್ ಠಾಣೆಯ ಇನ್ಸ್ಸ್ಪೆಕ್ಟರ್ ರಾಜಣ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. 4-5 ಜನರ ಗುಂಪು ಐಪಿಎಲ್ ಕ್ರಿಕೆಟ್ ಪಂದ್ಯದ ಹೆಸರುಗಳನ್ನು ಹೇಳಿಕೊಂಡು 2 ಸಾವಿರ ಬೆಟ್ಟಿಂಗ್ ಕಟ್ಟುವಂತೆ ಕೂಗುವುದು ಕೇಳಿಸಿತು. ದಾಳಿ ವೇಳೆ. ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.</p>.<p>ಚಿಂತಾಮಣಿ: ನಗರದ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಅಕ್ಟೋಬರ್ 11 ರಂದು ನಡೆಯಲಿದೆ.ಇಲ್ಲಿನ ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9 ಗೆ ಮತದಾನ ನಡೆಯಲಿದೆ.</p>.<p>ಶಿಕ್ಷಕರ ಅರ್ಹತಾ ಪರೀಕ್ಷೆ</p>.<p>ಚಿಕ್ಕಬಳ್ಳಾಪುರ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.</p>.<p>ಡಿ.ಇಡಿ ಅಭ್ಯರ್ಥಿಗಳಿಗೆ ಬೆಳಗಿನ ಅವಧಿ 9 ರಿಂದ 12 ಗಂಟೆಯವರೆಗೆ ಮತ್ತು ಬಿ.ಇಡಿ ಮಧ್ಯಾಹ್ನ ಅವಧಿ 1.30 ರಿಂದ 4.30 ಗಂಟೆಯವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ಗೊಲ್ಲ ಸಮದಾಯ ಅಭಿವೃದ್ದಿ ನಿಗಮ ಸ್ಥಾಪನೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಯಾದವ ಸಂಘದ ಚೇಳೂರು ತಾಲ್ಲೂಕು ಅಧ್ಯಕ್ಷ ಮಂಡ್ಯಂಪಲ್ಲಿ ಕೆ.ಎನ್.ಚಂದ್ರಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>‘ರಾಜ್ಯದಲ್ಲಿ ಗೊಲ್ಲ ಸಮುದಾಯದ 30 ಲಕ್ಷ ಜನರಿದ್ದು, ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಸಮುದಾಯವು ಸಮಾಜದ ಮುಖ್ಯ ವಾಹಿನಿಗೆ ಬರಲು ಅನುಕೂಲವಾಗಿದೆ. ಎಂದು ಹೇಳಿದರು.</p>.<p>ಚಿಂತಾಮಣಿ: ನಗರದ ಮುನ್ಸಿಪಲ್ ಕಾಂಪ್ಲೆಕ್ಸ್ ನ ನೀರಿನ ತೊಟ್ಟಿಯ ಕೆಳಗೆ ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಗುಂಪಿನ ಮೇಲೆ ಬುಧವಾರ ಜಿಲ್ಲಾ ಡಿ.ಸಿ.ಬಿ ಪೊಲೀಸರು ದಾಳಿ ನಡೆಸಿ ಒಬ್ಬರನ್ನು ಬಂಧಿಸಿ ₹ 4,600 ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.</p>.<p>ಜಿಲ್ಲಾ ಡಿ.ಸಿ.ಬಿ ಪೊಲೀಸ್ ಠಾಣೆಯ ಇನ್ಸ್ಸ್ಪೆಕ್ಟರ್ ರಾಜಣ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. 4-5 ಜನರ ಗುಂಪು ಐಪಿಎಲ್ ಕ್ರಿಕೆಟ್ ಪಂದ್ಯದ ಹೆಸರುಗಳನ್ನು ಹೇಳಿಕೊಂಡು 2 ಸಾವಿರ ಬೆಟ್ಟಿಂಗ್ ಕಟ್ಟುವಂತೆ ಕೂಗುವುದು ಕೇಳಿಸಿತು. ದಾಳಿ ವೇಳೆ. ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.</p>.<p>ಚಿಂತಾಮಣಿ: ನಗರದ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಅಕ್ಟೋಬರ್ 11 ರಂದು ನಡೆಯಲಿದೆ.ಇಲ್ಲಿನ ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9 ಗೆ ಮತದಾನ ನಡೆಯಲಿದೆ.</p>.<p>ಶಿಕ್ಷಕರ ಅರ್ಹತಾ ಪರೀಕ್ಷೆ</p>.<p>ಚಿಕ್ಕಬಳ್ಳಾಪುರ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.</p>.<p>ಡಿ.ಇಡಿ ಅಭ್ಯರ್ಥಿಗಳಿಗೆ ಬೆಳಗಿನ ಅವಧಿ 9 ರಿಂದ 12 ಗಂಟೆಯವರೆಗೆ ಮತ್ತು ಬಿ.ಇಡಿ ಮಧ್ಯಾಹ್ನ ಅವಧಿ 1.30 ರಿಂದ 4.30 ಗಂಟೆಯವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>