<p><strong>ಬಾಗೇಪಲ್ಲಿ:</strong> ಪಟ್ಟಣದ ವಿದ್ಯಾರ್ಥಿನಿಲಯದಲ್ಲಿ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ 3 ತಿಂಗಳ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನದ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಆರ್.ಶಿವಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ಉಚಿತ ಉಟ, ವಸತಿ ಕಲ್ಪಿಸಿರುವುದನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಅಂಕ ಪಡೆಯಬೇಕು. ವಿದ್ಯಾರ್ಥಿಗಳಿಗೆ 3 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ವೃತ್ತಿಮಾರ್ಗದರ್ಶನದ ಬಗ್ಗೆ ತರಬೇತಿ ನೀಡಲಾಗುವುದು ಎಂದರು.</p>.<p>ಕೆಎಎಸ್, ಐಎಎಸ್, ಐಪಿಎಸ್, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಟಿಇಟಿ, ಬ್ಯಾಂಕಿಂಗ್, ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಹಾಗೂ ವೃತ್ತಿಗಳ ಬಗ್ಗೆ ವಿಷಯಗಳ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ ಎಂದರು. <br><br> ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮುನಿರತ್ನಮ್ಮ, ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ಜಿ.ವಿ.ಚಂದ್ರಶೇಖರ್, ನಿಲಯ ಮೇಲ್ವಿಚಾರಕ ಎಸ್.ವೆಂಕಟೇಶ್, ಬಿ.ಎಸ್.ಕವಿತ, ರತ್ನಮಾಲಾ, ಎಂ.ಸಿ.ನರಸಿಂಹಪ್ಪ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಪಟ್ಟಣದ ವಿದ್ಯಾರ್ಥಿನಿಲಯದಲ್ಲಿ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ 3 ತಿಂಗಳ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನದ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಆರ್.ಶಿವಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ಉಚಿತ ಉಟ, ವಸತಿ ಕಲ್ಪಿಸಿರುವುದನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಅಂಕ ಪಡೆಯಬೇಕು. ವಿದ್ಯಾರ್ಥಿಗಳಿಗೆ 3 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ವೃತ್ತಿಮಾರ್ಗದರ್ಶನದ ಬಗ್ಗೆ ತರಬೇತಿ ನೀಡಲಾಗುವುದು ಎಂದರು.</p>.<p>ಕೆಎಎಸ್, ಐಎಎಸ್, ಐಪಿಎಸ್, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಟಿಇಟಿ, ಬ್ಯಾಂಕಿಂಗ್, ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಹಾಗೂ ವೃತ್ತಿಗಳ ಬಗ್ಗೆ ವಿಷಯಗಳ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ ಎಂದರು. <br><br> ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮುನಿರತ್ನಮ್ಮ, ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ಜಿ.ವಿ.ಚಂದ್ರಶೇಖರ್, ನಿಲಯ ಮೇಲ್ವಿಚಾರಕ ಎಸ್.ವೆಂಕಟೇಶ್, ಬಿ.ಎಸ್.ಕವಿತ, ರತ್ನಮಾಲಾ, ಎಂ.ಸಿ.ನರಸಿಂಹಪ್ಪ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>