<p><strong>ಬಾಗೇಪಲ್ಲಿ: </strong>ಕೋವಿಡ್-19 ಸೋಂಕಿನ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ದಲಿತ ಮುಖಂಡರು ಗ್ರೇಡ್ 2 ತಹಶೀಲ್ದಾರ್ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.</p>.<p>ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಬೂರಗಮಡುಗು ನರಸಿಂಹಪ್ಪ ಮಾತನಾಡಿ, ಕೊರೊನಾ ಸಂಕಷ್ಟ ಸಮಯದಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಜಾತಿ ದೌರ್ಜನ್ಯವನ್ನು ದಲಿತ ಹಕ್ಕುಗಳ ಸಮಿತಿ ಖಂಡಿಸುತ್ತದೆ ಎಂದರು.</p>.<p>ತಾಲ್ಲೂಕು, ಜಿಲ್ಲೆ ಹಾಗೂ ವಿವಿಧ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ದಲಿತರು, ಕೃಷಿ ಕೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಚನ್ನರಾಯಪ್ಪ, ಮುತ್ತು, ಎನ್.ವಿ.ಕೃಷ್ಣಪ್ಪ, ವೆಂಕಟೇಶ್, ಗೌರಿಬಿದನೂರಿನ ಸಂಚಾಲಕ ಲಕ್ಷ್ಮೀನಾರಾಯಣ, ಆಂಜಿನಪ್ಪ, ಜಿ.ಕೃಷ್ಣಪ್ಪ, ಶಂಕರನಾಯಕ್, ರವಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ: </strong>ಕೋವಿಡ್-19 ಸೋಂಕಿನ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ದಲಿತ ಮುಖಂಡರು ಗ್ರೇಡ್ 2 ತಹಶೀಲ್ದಾರ್ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.</p>.<p>ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಬೂರಗಮಡುಗು ನರಸಿಂಹಪ್ಪ ಮಾತನಾಡಿ, ಕೊರೊನಾ ಸಂಕಷ್ಟ ಸಮಯದಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಜಾತಿ ದೌರ್ಜನ್ಯವನ್ನು ದಲಿತ ಹಕ್ಕುಗಳ ಸಮಿತಿ ಖಂಡಿಸುತ್ತದೆ ಎಂದರು.</p>.<p>ತಾಲ್ಲೂಕು, ಜಿಲ್ಲೆ ಹಾಗೂ ವಿವಿಧ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ದಲಿತರು, ಕೃಷಿ ಕೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಚನ್ನರಾಯಪ್ಪ, ಮುತ್ತು, ಎನ್.ವಿ.ಕೃಷ್ಣಪ್ಪ, ವೆಂಕಟೇಶ್, ಗೌರಿಬಿದನೂರಿನ ಸಂಚಾಲಕ ಲಕ್ಷ್ಮೀನಾರಾಯಣ, ಆಂಜಿನಪ್ಪ, ಜಿ.ಕೃಷ್ಣಪ್ಪ, ಶಂಕರನಾಯಕ್, ರವಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>