ಉಪಾಧ್ಯಕ್ಷೆ ಸ್ಥಾನ ಸರಸ್ವತಮ್ಮ ಅವರಿಗೆ ಬಿಟ್ಟು ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಚಿವ ಡಾ.ಕೆ.ಸುಧಾಕರ್, ಅನೇಕ ಶಾಸಕರು ಹೇಳಿದರೂ ನಿರ್ಮಲಾ ಅವರು ಸೊಪ್ಪು ಹಾಕದೆ, ಸ್ವಪಕ್ಷೀಯರೇ ಸೆಡ್ಡು ಹೊಡೆದು ಅಧಿಕಾರದಲ್ಲಿ ಮುಂದುವರಿದಿದ್ದಾರೆ ಎನ್ನಲಾಗಿದೆ. ಮುಂಬರುವ ಚುನಾವಣೆಗಳ ರಾಜಕೀಯ ಲೆಕ್ಕಾಚಾರದಲ್ಲಿ ಈ ವಿದ್ಯಮಾನ ನಡೆಯುತ್ತಿದೆ ಎನ್ನುವ ವಿಶ್ಲೇಷಣೆಗಳೂ ಹರಿದಾಡುತ್ತಿವೆ.