<p><strong>ಚಿಕ್ಕಬಳ್ಳಾಪುರ</strong>: ಬಿಜೆಪಿ ಒಡ್ಡಿದ ಆಮಿಷಗಳಿಗೆ ಬಲಿಯಾಗಿ ರಾಜ್ಯದಲ್ಲಿ ಸುಭದ್ರವಾಗಿದ್ದ ಮೈತ್ರಿ ಸರ್ಕಾರವನ್ನು ಕೆಡವಿ ಉಪ ಚುನಾವಣೆಗೆ ಕಾರಣವಾಗಿರುವ ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ನಂದಿ ಎಂ.ಅಂಜಿನಪ್ಪ ಪರ ರೋಡ್ ಶೋದಲ್ಲಿ ಮಾತನಾಡಿದರು.</p>.<p>‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಅವರು ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದು ಜನರಿಗೆ ತಿಳಿದಿದೆ. ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಬಿಜೆಪಿಗೆ ಸೇರಿರುವ ಸುಧಾಕರ್ ಅವರಿಗೆ ಕ್ಷೇತ್ರದ ಮತದಾರರು ಬುದ್ಧಿ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p>.<p>ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರಾದ ದೇಶಪಾಂಡೆ, ರಮೇಶ್ ಕುಮಾರ್ ಅವರು ಸಮಿಶ್ರ ಸರ್ಕಾರವನ್ನು ಕಡೆವಲು ಯಾವುದೇ ಪ್ರಯತ್ನ ಮಾಡಲಿಲ್ಲ. ಅನರ್ಹ ಶಾಸಕರ ಸ್ವಾರ್ಥವೇ ಸರ್ಕಾರ ಉರುಳಲು ಕಾರಣ ಮತದಾರರು ಗಂಭೀರವಾಗಿ ಆಲೋಚಿಸಬೇಕು ಎಂದರು.</p>.<p>ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ₹ 450 ಇದ್ದ ಅಡುಗೆ ಅನಿಲ ₹ 950ಕ್ಕೆ ಏರಿಕೆಯಾಗಿದೆ. ದಿನ ಬಳಕೆ ವಸ್ತುಗಳು ತುಟ್ಟಿಯಾಗಿವೆ ಎಂದು ಆರೋಪಿಸಿದರು.<br /><br />ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ 7 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರ ಅದನ್ನು 3 ಕೆ.ಜಿ.ಗೆ ಇಳಿಸಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ಜಯಂತಿ ಅಂಜನಪ್ಪ, ಮಂಗಳ ಪ್ರಕಾಶ್, ಮಾಜಿ ಶಾಸಕಿ ಅನುಸೂಯಮ್ಮ, ಮಾಜಿ ಶಾಸಕ ಮುನಿಯಪ್ಪ, ಆರತಿ ಪ್ರಕಾಶ್, ಮಮತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಬಿಜೆಪಿ ಒಡ್ಡಿದ ಆಮಿಷಗಳಿಗೆ ಬಲಿಯಾಗಿ ರಾಜ್ಯದಲ್ಲಿ ಸುಭದ್ರವಾಗಿದ್ದ ಮೈತ್ರಿ ಸರ್ಕಾರವನ್ನು ಕೆಡವಿ ಉಪ ಚುನಾವಣೆಗೆ ಕಾರಣವಾಗಿರುವ ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ನಂದಿ ಎಂ.ಅಂಜಿನಪ್ಪ ಪರ ರೋಡ್ ಶೋದಲ್ಲಿ ಮಾತನಾಡಿದರು.</p>.<p>‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಅವರು ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದು ಜನರಿಗೆ ತಿಳಿದಿದೆ. ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಬಿಜೆಪಿಗೆ ಸೇರಿರುವ ಸುಧಾಕರ್ ಅವರಿಗೆ ಕ್ಷೇತ್ರದ ಮತದಾರರು ಬುದ್ಧಿ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p>.<p>ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಪಕ್ಷದ ಮುಖಂಡರಾದ ದೇಶಪಾಂಡೆ, ರಮೇಶ್ ಕುಮಾರ್ ಅವರು ಸಮಿಶ್ರ ಸರ್ಕಾರವನ್ನು ಕಡೆವಲು ಯಾವುದೇ ಪ್ರಯತ್ನ ಮಾಡಲಿಲ್ಲ. ಅನರ್ಹ ಶಾಸಕರ ಸ್ವಾರ್ಥವೇ ಸರ್ಕಾರ ಉರುಳಲು ಕಾರಣ ಮತದಾರರು ಗಂಭೀರವಾಗಿ ಆಲೋಚಿಸಬೇಕು ಎಂದರು.</p>.<p>ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ₹ 450 ಇದ್ದ ಅಡುಗೆ ಅನಿಲ ₹ 950ಕ್ಕೆ ಏರಿಕೆಯಾಗಿದೆ. ದಿನ ಬಳಕೆ ವಸ್ತುಗಳು ತುಟ್ಟಿಯಾಗಿವೆ ಎಂದು ಆರೋಪಿಸಿದರು.<br /><br />ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ 7 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರ ಅದನ್ನು 3 ಕೆ.ಜಿ.ಗೆ ಇಳಿಸಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ಜಯಂತಿ ಅಂಜನಪ್ಪ, ಮಂಗಳ ಪ್ರಕಾಶ್, ಮಾಜಿ ಶಾಸಕಿ ಅನುಸೂಯಮ್ಮ, ಮಾಜಿ ಶಾಸಕ ಮುನಿಯಪ್ಪ, ಆರತಿ ಪ್ರಕಾಶ್, ಮಮತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>