ಚಿಂತಾಮಣಿ: ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಏಪ್ರಿಲ್ ಒಂದರಂದು ಸೋಮವಾರ ಮಧ್ಯಾಹ್ನ 3ಕ್ಕೆ ಸಚಿವ ಡಾ.ಎಂ.ಸಿ.ಸುಧಾಕರ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಕಾಂಗ್ರೆಸ್ ತಾಲ್ಲೂಕು ವಿವಿಧ ಘಟಕದ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಚುನಾವಣೆ ಪ್ರಚಾರ ಕೈಗೊಳ್ಳುವ ಬಗ್ಗೆ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ತಾಲ್ಲೂಕು ಕಾಂಗ್ರೆಸ್ ಘಟಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.