<p><strong>ಚಿಕ್ಕಬಳ್ಳಾಪುರ</strong>: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಅನುಕೂಲ ಆಗುತ್ತದೆ ಎನ್ನುವ ಮಾತು ಇತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ದಲಿತ ವಿರೋಧಿ ಆಗಿದೆ’ ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರಪ್ಪ ಆರೋಪಿಸಿದರು. </p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮರ್ಯಾದಾಗೇಡು ಹತ್ಯೆಗಳು ನಡೆಯುತ್ತಿವೆ. ದಲಿತ ಸಮುದಾಯದ ಡಾ.ಜಿ.ಪರಮೇಶ್ವರ ಗೃಹ ಸಚಿವರಾಗಿದ್ದರೂ ದಲಿತರ ಮೇಲೆ ಹಲ್ಲೆಗಳು ನಿರಂತರವಾಗಿವೆ ಎಂದು ದೂರಿದರು. </p>.<p>ಕಾಂಗ್ರೆಸ್ ದಲಿತರ ಪರವಾಗಿ ಇಲ್ಲ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣವನ್ನು ಗ್ಯಾರಂಟಿಗಳಿಗಾಗಿ ಬಳಕೆ ಮಾಡಿದ್ದಾರೆ. ಇದರಿಂದ ದಲಿತರ ಕಾಲೊನಿಗಳು ಅಭಿವೃದ್ಧಿ ಆಗುತ್ತಿಲ್ಲ. ಸಮಾಜ ಕಲ್ಯಾಣ ಸಚಿವರು ಸಹ ದಲಿತರಾಗಿದ್ದರೂ ಅಸಹಾಯಕರಾಗಿ ಇದ್ದಾರೆ ಎಂದು ಹೇಳಿದರು.</p>.<p>ಈ ಎಲ್ಲ ವಿಚಾರಗಳ ಚರ್ಚೆ ಹಿನ್ನೆಲೆಯಲ್ಲಿ ನ.8ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ರಾಜ್ಯದ ಮಟ್ಟದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.</p>.<p>ಸದಾಶಿವ ಆಯೋಗದ ವರದಿ ಇಂದಿಗೂ ಜಾರಿಯಾಗಿಲ್ಲ. ಈ ವರದಿ ಜಾರಿಗೆ ಆಗ್ರಹಿಸಲಾಗುವುದು. ಕಾಂತರಾಜ್ ಸಮಿತಿ ನೀಡಿರುವ ಜಾತಿ ಗಣತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈ ಹಿಂದೆ ದೇವನೂರ ಮಹಾದೇವ, ಸಿದ್ದಲಿಂಗಯ್ಯ ಮತ್ತಿತರ ಮುಖಂಡರು ದಸಂಸ ಹೋರಾಟಗಳನ್ನು ದೊಡ್ಡ ಮಟ್ಟದಲ್ಲಿ ಕಟ್ಟಿದರು. ಆ ಹೋರಾಟದ ಕಿಚ್ಚು ಎಲ್ಲಿ ಹೋಯಿತು ಎನ್ನುವ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಅಧಿವೇಶನದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು. </p>.<p>ಮುಖಂಡರಾದ ರತ್ನಮ್ಮ ಮಾತನಾಡಿ, ಮಹಿಳೆಯರ ಮೇಲೆ ಹಲ್ಲೆಗಳು ಹೆಚ್ಚಿವೆ. ಕೊಲೆಗಳು ನಡೆಯುತ್ತಿವೆ. ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ, ಶೋಷಣೆ ತಡೆಗೆ ದಲಿತ ಮಹಿಳಾ ಒಕ್ಕೂಟ ಕೆಲಸ ಮಾಡುತ್ತಿದೆ. ಅಧಿವೇಶನದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ ಆಗಬೇಕು ಎಂದು ಕೋರಿದರು.</p>.<p> ದಸಂಸ ಪದಾಧಿಕಾರಿಗಳಾದ ಶ್ರೀನಿವಾಸ, ರಾಜಣ್ಣ, ಮುನಿರಾಜು ಮರಸನಹಳ್ಳಿ ಇತರರು ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಅನುಕೂಲ ಆಗುತ್ತದೆ ಎನ್ನುವ ಮಾತು ಇತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ದಲಿತ ವಿರೋಧಿ ಆಗಿದೆ’ ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರಪ್ಪ ಆರೋಪಿಸಿದರು. </p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮರ್ಯಾದಾಗೇಡು ಹತ್ಯೆಗಳು ನಡೆಯುತ್ತಿವೆ. ದಲಿತ ಸಮುದಾಯದ ಡಾ.ಜಿ.ಪರಮೇಶ್ವರ ಗೃಹ ಸಚಿವರಾಗಿದ್ದರೂ ದಲಿತರ ಮೇಲೆ ಹಲ್ಲೆಗಳು ನಿರಂತರವಾಗಿವೆ ಎಂದು ದೂರಿದರು. </p>.<p>ಕಾಂಗ್ರೆಸ್ ದಲಿತರ ಪರವಾಗಿ ಇಲ್ಲ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣವನ್ನು ಗ್ಯಾರಂಟಿಗಳಿಗಾಗಿ ಬಳಕೆ ಮಾಡಿದ್ದಾರೆ. ಇದರಿಂದ ದಲಿತರ ಕಾಲೊನಿಗಳು ಅಭಿವೃದ್ಧಿ ಆಗುತ್ತಿಲ್ಲ. ಸಮಾಜ ಕಲ್ಯಾಣ ಸಚಿವರು ಸಹ ದಲಿತರಾಗಿದ್ದರೂ ಅಸಹಾಯಕರಾಗಿ ಇದ್ದಾರೆ ಎಂದು ಹೇಳಿದರು.</p>.<p>ಈ ಎಲ್ಲ ವಿಚಾರಗಳ ಚರ್ಚೆ ಹಿನ್ನೆಲೆಯಲ್ಲಿ ನ.8ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ರಾಜ್ಯದ ಮಟ್ಟದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.</p>.<p>ಸದಾಶಿವ ಆಯೋಗದ ವರದಿ ಇಂದಿಗೂ ಜಾರಿಯಾಗಿಲ್ಲ. ಈ ವರದಿ ಜಾರಿಗೆ ಆಗ್ರಹಿಸಲಾಗುವುದು. ಕಾಂತರಾಜ್ ಸಮಿತಿ ನೀಡಿರುವ ಜಾತಿ ಗಣತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈ ಹಿಂದೆ ದೇವನೂರ ಮಹಾದೇವ, ಸಿದ್ದಲಿಂಗಯ್ಯ ಮತ್ತಿತರ ಮುಖಂಡರು ದಸಂಸ ಹೋರಾಟಗಳನ್ನು ದೊಡ್ಡ ಮಟ್ಟದಲ್ಲಿ ಕಟ್ಟಿದರು. ಆ ಹೋರಾಟದ ಕಿಚ್ಚು ಎಲ್ಲಿ ಹೋಯಿತು ಎನ್ನುವ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಅಧಿವೇಶನದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು. </p>.<p>ಮುಖಂಡರಾದ ರತ್ನಮ್ಮ ಮಾತನಾಡಿ, ಮಹಿಳೆಯರ ಮೇಲೆ ಹಲ್ಲೆಗಳು ಹೆಚ್ಚಿವೆ. ಕೊಲೆಗಳು ನಡೆಯುತ್ತಿವೆ. ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ, ಶೋಷಣೆ ತಡೆಗೆ ದಲಿತ ಮಹಿಳಾ ಒಕ್ಕೂಟ ಕೆಲಸ ಮಾಡುತ್ತಿದೆ. ಅಧಿವೇಶನದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ ಆಗಬೇಕು ಎಂದು ಕೋರಿದರು.</p>.<p> ದಸಂಸ ಪದಾಧಿಕಾರಿಗಳಾದ ಶ್ರೀನಿವಾಸ, ರಾಜಣ್ಣ, ಮುನಿರಾಜು ಮರಸನಹಳ್ಳಿ ಇತರರು ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>