ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏನು ಗತಿ ಇಲ್ಲದವರನ್ನು ತಂದು ಕಾಂಗ್ರೆಸ್ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಪಾಲರನ್ನಾಗಿ ಮಾಡಿತು. ಮೂರು ಕಾಸಿನ ಯೋಗ್ಯತೆ ಇಲ್ಲದವರು 86 ವಯಸ್ಸಿನಲ್ಲಿ ಪಕ್ಷಕ್ಕೆ ದ್ರೋಹ ಮಾಡಿ ಹೋದರು. ತಾಯಿಗೆ ಮೋಸ ಮಾಡುವ ಇಂತಹವರಿಂದಲೇ ಪಕ್ಷಕ್ಕೆ ಹಾನಿಯಾಗಿದೆ’ ಎಂದು ಆರೋಪಿಸಿದರು.