ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ಪೊಲೀಸ್ ಠಾಣೆ ಬಳಿ ಕಾಂಗ್ರೆಸ್ ಮುಖಂಡನ ಹತ್ಯೆ

Last Updated 20 ಮಾರ್ಚ್ 2021, 12:49 IST
ಅಕ್ಷರ ಗಾತ್ರ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿ): ನಗರ ಪೊಲೀಸ್ ಠಾಣೆ ಬಳಿ ಶನಿವಾರ ಮಧ್ಯಾಹ್ನ ರೌಡಿಶೀಟರ್ ಹಾಗೂ ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಮ್ಜದ್ ಖಾನ್ (45) ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

ನಗರ ಪೊಲೀಸ್ ಠಾಣೆ ಸಮೀಪದ ರೈಲ್ವೆ ಬ್ರಿಡ್ಜ್ ಬಳಿ ದ್ವಿಚಕ್ರ ವಾಹನದಲ್ಲಿ ಅಮ್ಜದ್ ಖಾನ್ ಬರುತ್ತಿದ್ದರು. ಈ ವೇಲೆ ಓಮ್ನಿ ವಾಹನಯಲ್ಲಿ ಬಂದ ದುಷ್ಕರ್ಮಿಗಳು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಲಾಂಗ್‌ಗಳಿಂದ ಹಲ್ಲೆ ನಡೆಸಿದ್ದಾರೆ.

ಜನರ ಕೂಗಾಟ ಕೇಳಿಸಿಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದುಷ್ಕರ್ಮಿಗಳು ವಾಹನದಲ್ಲಿ ಪರಾರಿಯಾಗಿದ್ದಾರೆ.

ಈ ವೇಳೆ ಕಾನ್‌ಸ್ಟೆಬಲ್ ಒಬ್ಬರು ಲಾಠಿ ಬೀಸಿದ್ದುಓಮ್ನಿಯ ವ್ಯಾನಿನ ಗಾಜು ಪುಡಿಯಾಗಿದೆ. ಪೊಲೀಸರು ದುಷ್ಕರ್ಮಿಗಳನ್ನು ಹಿಂಬಾಲಿಸಿದರೂ ಅವರು ತಪ್ಪಿಸಿಕೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ‍ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲಿ ಕೊಲೆ ಮಾಡಿದವರನ್ನು ಬಂಧಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT