ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆ ಸೋಮವಾರ ಮಧ್ಯಾಹ್ನ 3ಕ್ಕೆ ನಗರ ಪ್ರವೇಶಿಸಲಿದೆ. ಕೆ.ವಿ. ಕ್ಯಾಂಪಸ್ ಬಳಿ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪಕ್ಷದ ಜಿಲ್ಲಾ ಉಸ್ತುವಾರಿ ವಿ.ಎಸ್. ಉಗ್ರಪ್ಪ ಸೇರಿದಂತೆ ಪಕ್ಷದ ರಾಜ್ಯ ನಾಯಕರ ದಂಡೇ ಚಿಕ್ಕಬಳ್ಳಾಪುರಕ್ಕೆ ಬರಲಿದೆ.