ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ‘ಜಿಲ್ಲೆಯ ಅಂತರ್ಜಲ ವೃದ್ಧಿಗಾಗಿ ಅಂದಿನ ಕಾಂಗ್ರೆಸ್ನ ಸಚಿವರಾಗಿದ್ದ ಕೃಷ್ಣ ಬೈರೇಗೌಡರು ರೂಪಿಸಿರುವ ಯೋಜನೆಯಾದ್ದು, ಸಿಎಂ ಆಗಿದ್ದ ಸಿದ್ದರಾಮಯ್ಯ ಅನುದಾನ ಬಿಡುಗಡೆಗೊಳಿಸಿ ಇಲ್ಲಿನ ರೈತರಿಗೆ ಅನುವು ಮಾಡಿಕೊಟ್ಟಿದ್ದಾರೆ. ಯೋಜನೆ ಅನುಷ್ಟಾನದಲ್ಲಿ ಮಾಜಿ ಸಚಿವರಾದ ಶಿವಶಂಕರರೆಡ್ಡಿ, ವಿ.ಮುನಿಯಪ್ಪ, ರಮೇಶ್ ಕುಮಾರ್ ಅವರ ಶ್ರಮ ಅಡಗಿದ್ದು, ಎಲ್ಲರಿಗೂ ಜಿಲ್ಲೆಯ ಜನತೆ ಪರ ಅಭಿನಂದನೆ ಸಲ್ಲಿಸುವುದಾಗಿ’ ತಿಳಿಸಿದರು.