ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲೇ ಮಾದರಿ ಸರ್ಕಾರ: ಸುಧಾಕರ್

ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವದ್ವಯರು
Published 5 ಅಕ್ಟೋಬರ್ 2023, 15:27 IST
Last Updated 5 ಅಕ್ಟೋಬರ್ 2023, 15:27 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಮನ್ನಣೆ ದೊರೆತಿದ್ದು, ಸುಭದ್ರ ಆಡಳಿತ ನೀಡುವ ನಿಟ್ಟಿನಲ್ಲಿ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದು ದೇಶದಲ್ಲಿಯೇ ಮಾದರಿಯಾದ ಸರ್ಕಾರವಾಗಿದೆ’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕಾಗಿ ಜಾಗ ಗುರುತಿಸಲು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರೊಂದಿಗೆ ಬಂದಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿದ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ‘ಕಾಂಗ್ರೆಸ್‌ನ ಸಂಘಟನೆ, ಏಳಿಗೆಯನ್ನು ಎದುರಿಸಲಾಗದೆ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿವೆ. ಅದರಿಂದ ನಮಗೇನೂ ತೊಂದರೆಯಿಲ್ಲ’ ಎಂದರು.

‘ಮುಂದಿನ ದಿನಗಳಲ್ಲಿ ಎದುರಾಗುವ ಲೋಕಸಭೆ ಚುನಾವಣೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾವು ಒಗ್ಗಟ್ಟಾಗಿ ಎದುರಿಸಬೇಕಿದೆ. ಶಿಡ್ಲಘಟ್ಟದಲ್ಲಿ ಬಣ ರಾಜಕೀಯ ಬಿಟ್ಟು ಎಲ್ಲರೂ ಒಂದಾಗಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕೆಂದು’ ಹೇಳಿದರು.

ಸಚಿವ ಕೆ.ವೆಂಕಟೇಶ್, ಡಾ.ಎಂ.ಸಿ.ಸುಧಾಕರ್ ಅವರನ್ನು ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ನೇತೃತ್ವದಲ್ಲಿ ಬೃಹತ್ ರೇಷ್ಮೆ ಹಾರ ಹಾಕಿ ಸನ್ಮಾನಿಸಲಾಯಿತು.

ಕೆಪಿಸಿಸಿ ಕೋ ಆರ್ಡಿನೇಟರ್ ರಾಜೀವ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್‌ಗೌಡ, ಅಫ್ಸರ್‌ ಪಾಷ, ಯಾಸ್ಮೀನ್ ತಾಜ್, ಟಿ.ಕೆ.ನಟರಾಜ್, ಡಿ.ಪಿ.ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT