<p><strong>ಶಿಡ್ಲಘಟ್ಟ:</strong> ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.</p>.<p>ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕದಿಬ್ಬೂರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆ ಹಿತ ದೃಷ್ಟಿಯಿಂದ ಪಕ್ಷದ ಹೈ ಕಮಾಂಡ್ ಯಾವುದೇ ಸಂದರ್ಭದಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದರು.</p>.<p><strong>ನ.8ಕ್ಕೆ ಸಿಎಂ ಭೇಟಿ:</strong> ಈ ತಿಂಗಳ 27ರಂದು ಸಿಎಂ ಸಿದ್ದರಾಮಯ್ಯ ಅವರು ₹200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಬೇಕಿತ್ತು. ಕಾರ್ಯ ಒತ್ತಡದಿಂದಾಗಿ ನ.8ಕ್ಕೆ ಮುಂದೂಡಲಾಗಿದೆ ಎಂದರು.</p>.<p>ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಟೆಂಟರ್ ಮುಗಿದು, ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಸಾದಲಿ ಬಳಿಯ ರಾಮಸಮುದ್ರ ಕೆರೆಯಿಂದ ಶಿಡ್ಲಘಟ್ಟ ನಗರಕ್ಕೆ ಅಮೃತ್-2 ಯೋಜನೆಯಡಿ ₹60 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆ. ನಗರದಲ್ಲಿ 2ನೇ ಹಂತದ ಒಳ ಚರಂಡಿ ಯೋಜನೆ. ಸಾದಲಿ ಬಳಿ ನಿರ್ಮಾಣವಾಗಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಅಂದೇ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.</p>.<p><strong>ಬೀದಿ ನಾಯಿಗಳ ಕಾಟ:</strong> ಬೀದಿ ನಾಯಿಗಳ ಹಾವಳಿ ಶಿಡ್ಲಘಟ್ಟ ನಗರಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ. ಇದು ಎಲ್ಲ ಕಡೆಯೂ ವ್ಯಾಪಿಸಿದೆ. ನಾಯಿಗಳ ನಿಯಂತ್ರಣಕ್ಕೆ ಸರ್ಕಾರ ಬದ್ಧವಾಗಿದೆ. ಆದರೂ ನಾಯಿಗಳ ನಿಯಂತ್ರಣಕ್ಕೆ ನಾನಾ ರೀತಿಯ ನೀತಿ ನಿಯಮಗಳನ್ನು ಪಾಲಿಸಬೇಕಾಗಿದೆ. ಅದರ ನಿಯಂತ್ರಣಕ್ಕೆ ತಾಂತ್ರಿಕ ಸಮಸ್ಯೆಯಾಗುತ್ತಿದೆ ಎಂದರು.</p>.<p>ಒಂದು ಕಡೆ ಸುಪ್ರೀಂ ಕೋರ್ಟ್ ಸೂಚನೆ, ಇನ್ನೊಂದು ಕಡೆ ಪ್ರಾಣಿ ದಯಾ ಸಂಘದ ಕಾನೂನು ಪಾಲಿಸಿಕೊಂಡು ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ನಿಯಂತ್ರಣ ಮಾಡಬೇಕಿದೆ. ಇದಕ್ಕಾಗಿ ಅನೇಕ ಬಾರಿ ಟೆಂಡರ್ ಕರೆಯಲಾಗಿದೆ ಎಂದರು.</p>.<p>ಶ್ವಾನ ಪ್ರಿಯರು ನಾಯಿಗಳನ್ನು ಬೀದಿಗೆ ಬಿಡದೆ ಮನೆಯಲ್ಲಿಯೇ ಇರಿಸಿಕೊಳ್ಳಬೇಕಾಗುತ್ತದೆ. ಬೀದಿ ನಾಯಿಗಳಿಗೆ ತಿಂಡಿ ತಿನಿಸು ನೀಡದೆ ಪರೋಕ್ಷವಾಗಿ ಅವುಗಳ ನಿಯಂತ್ರಣಕ್ಕೆ ಸಹಕರಿಸಬೇಕಾಗುತ್ತದೆ ಎಂದು ಮನವರಿಕೆ ಮಾಡಿದರು.</p>.<p>ಜೆಡಿಎಸ್ ಮುಖಂಡ ಡಾ.ಧನಂಜಯರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಡಿ.ಸಿ.ರಾಮಚಂದ್ರ, ಡಿ.ಜೆ.ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಮುನಿಯಪ್ಪ, ಕೆ.ಆನಂದ್, ಸಂತೋಷ್ ಕ್ಯಾತಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.</p>.<p>ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕದಿಬ್ಬೂರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆ ಹಿತ ದೃಷ್ಟಿಯಿಂದ ಪಕ್ಷದ ಹೈ ಕಮಾಂಡ್ ಯಾವುದೇ ಸಂದರ್ಭದಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದರು.</p>.<p><strong>ನ.8ಕ್ಕೆ ಸಿಎಂ ಭೇಟಿ:</strong> ಈ ತಿಂಗಳ 27ರಂದು ಸಿಎಂ ಸಿದ್ದರಾಮಯ್ಯ ಅವರು ₹200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಬೇಕಿತ್ತು. ಕಾರ್ಯ ಒತ್ತಡದಿಂದಾಗಿ ನ.8ಕ್ಕೆ ಮುಂದೂಡಲಾಗಿದೆ ಎಂದರು.</p>.<p>ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಟೆಂಟರ್ ಮುಗಿದು, ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಸಾದಲಿ ಬಳಿಯ ರಾಮಸಮುದ್ರ ಕೆರೆಯಿಂದ ಶಿಡ್ಲಘಟ್ಟ ನಗರಕ್ಕೆ ಅಮೃತ್-2 ಯೋಜನೆಯಡಿ ₹60 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆ. ನಗರದಲ್ಲಿ 2ನೇ ಹಂತದ ಒಳ ಚರಂಡಿ ಯೋಜನೆ. ಸಾದಲಿ ಬಳಿ ನಿರ್ಮಾಣವಾಗಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಅಂದೇ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.</p>.<p><strong>ಬೀದಿ ನಾಯಿಗಳ ಕಾಟ:</strong> ಬೀದಿ ನಾಯಿಗಳ ಹಾವಳಿ ಶಿಡ್ಲಘಟ್ಟ ನಗರಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ. ಇದು ಎಲ್ಲ ಕಡೆಯೂ ವ್ಯಾಪಿಸಿದೆ. ನಾಯಿಗಳ ನಿಯಂತ್ರಣಕ್ಕೆ ಸರ್ಕಾರ ಬದ್ಧವಾಗಿದೆ. ಆದರೂ ನಾಯಿಗಳ ನಿಯಂತ್ರಣಕ್ಕೆ ನಾನಾ ರೀತಿಯ ನೀತಿ ನಿಯಮಗಳನ್ನು ಪಾಲಿಸಬೇಕಾಗಿದೆ. ಅದರ ನಿಯಂತ್ರಣಕ್ಕೆ ತಾಂತ್ರಿಕ ಸಮಸ್ಯೆಯಾಗುತ್ತಿದೆ ಎಂದರು.</p>.<p>ಒಂದು ಕಡೆ ಸುಪ್ರೀಂ ಕೋರ್ಟ್ ಸೂಚನೆ, ಇನ್ನೊಂದು ಕಡೆ ಪ್ರಾಣಿ ದಯಾ ಸಂಘದ ಕಾನೂನು ಪಾಲಿಸಿಕೊಂಡು ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ನಿಯಂತ್ರಣ ಮಾಡಬೇಕಿದೆ. ಇದಕ್ಕಾಗಿ ಅನೇಕ ಬಾರಿ ಟೆಂಡರ್ ಕರೆಯಲಾಗಿದೆ ಎಂದರು.</p>.<p>ಶ್ವಾನ ಪ್ರಿಯರು ನಾಯಿಗಳನ್ನು ಬೀದಿಗೆ ಬಿಡದೆ ಮನೆಯಲ್ಲಿಯೇ ಇರಿಸಿಕೊಳ್ಳಬೇಕಾಗುತ್ತದೆ. ಬೀದಿ ನಾಯಿಗಳಿಗೆ ತಿಂಡಿ ತಿನಿಸು ನೀಡದೆ ಪರೋಕ್ಷವಾಗಿ ಅವುಗಳ ನಿಯಂತ್ರಣಕ್ಕೆ ಸಹಕರಿಸಬೇಕಾಗುತ್ತದೆ ಎಂದು ಮನವರಿಕೆ ಮಾಡಿದರು.</p>.<p>ಜೆಡಿಎಸ್ ಮುಖಂಡ ಡಾ.ಧನಂಜಯರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಡಿ.ಸಿ.ರಾಮಚಂದ್ರ, ಡಿ.ಜೆ.ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಮುನಿಯಪ್ಪ, ಕೆ.ಆನಂದ್, ಸಂತೋಷ್ ಕ್ಯಾತಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>