ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಕ್ಕೆ ಕಾಂಗ್ರೆಸ್ನವರು ಹೋಗುವ ಅವಶ್ಯಕತೆ ಏನಿದೆ? ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಮಂಗಳೂರಿಗೆ ಯಾವ, ಯಾವ ರಾಜ್ಯಗಳಿಂದ ಜನರನ್ನು ಕರೆತಂದಿದ್ದರು ಎನ್ನುವುದು ತನಿಖೆಯ ಬಳಿಕ ಬಯಲಿಗೆ ಬರಲಿದೆ’ ಎಂದು ತಿಳಿಸಿದರು.