<p><strong>ಶಿಡ್ಲಘಟ್ಟ:</strong> ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಎಂದು ಸುಂಡ್ರಹಳ್ಳಿ ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಆರ್.ಮೂರ್ತಪ್ಪ ಹೇಳಿದರು.</p>.<p>ತಾಲ್ಲೂಕಿನ ಜಂಗಮಕೋಟೆ ಹೋಬಳಿ ಸುಂಡ್ರಹಳ್ಳಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.</p>.<p>ಸಂವಿಧಾನ ನಮಗೆ ನೀಡಿರುವ ಹಕ್ಕುಗಳು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ದುರುಪಯೋಗ ಮಾಡಿಕೊಳ್ಳಬಾರದು ಎಂದರು.</p>.<p>ವಿದ್ಯಾರ್ಥಿಗಳು ಗ್ರಾಮದಲ್ಲಿ ಸಂಚರಿಸಿ ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ಇಂದಿರಾಗಾಂಧಿ ವಸತಿ ಶಾಲೆ ಶಿಕ್ಷಕರಾದ ಕೆ.ಎಸ್.ನಮ್ರತ, ಎಂ.ಎಚ್.ಆಶಾ, ಲಕ್ಷ್ಮಿ.ಎನ್, ಎಂ.ವೆಂಕಟಸ್ವಾಮಿ, ಎಸ್.ಎನ್.ಗಣೇಶ್, ಕೆ.ಕೆ.ಸುಬ್ರಮಣಿ, ಸುಮಾ, ಗಂಗಾಧರ, ಸರಳಾ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಎಂದು ಸುಂಡ್ರಹಳ್ಳಿ ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಆರ್.ಮೂರ್ತಪ್ಪ ಹೇಳಿದರು.</p>.<p>ತಾಲ್ಲೂಕಿನ ಜಂಗಮಕೋಟೆ ಹೋಬಳಿ ಸುಂಡ್ರಹಳ್ಳಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.</p>.<p>ಸಂವಿಧಾನ ನಮಗೆ ನೀಡಿರುವ ಹಕ್ಕುಗಳು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ದುರುಪಯೋಗ ಮಾಡಿಕೊಳ್ಳಬಾರದು ಎಂದರು.</p>.<p>ವಿದ್ಯಾರ್ಥಿಗಳು ಗ್ರಾಮದಲ್ಲಿ ಸಂಚರಿಸಿ ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ಇಂದಿರಾಗಾಂಧಿ ವಸತಿ ಶಾಲೆ ಶಿಕ್ಷಕರಾದ ಕೆ.ಎಸ್.ನಮ್ರತ, ಎಂ.ಎಚ್.ಆಶಾ, ಲಕ್ಷ್ಮಿ.ಎನ್, ಎಂ.ವೆಂಕಟಸ್ವಾಮಿ, ಎಸ್.ಎನ್.ಗಣೇಶ್, ಕೆ.ಕೆ.ಸುಬ್ರಮಣಿ, ಸುಮಾ, ಗಂಗಾಧರ, ಸರಳಾ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>