<p><strong>ಚಿಂತಾಮಣಿ:</strong> ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟ್ಟೈಸುವ ಜೋಡಣೆ ಎಂದು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯ್ಕ್ ತಿಳಿಸಿದರು.</p>.<p>ತಾಲ್ಲೂಕಿನ ಕೈವಾರ, ಮಸ್ತೇನಹಳ್ಳಿ, ಕೋನಪ್ಪಲ್ಲಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಶನಿವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಮಾತನಾಡಿದರು.</p>.<p>ಪೀಠಿಕೆಯ ಮೊದಲ ಪದಗಳು ನಾವು, ಜನಗಳು. ಭಾರತದಲ್ಲಿ ಅಧಿಕಾರ ಜನಗಳ ಕೈಯಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೊಬ್ಬ ನಾಗರಿಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ ಎಂದರು.</p>.<p>ಸಂವಿಧಾನ ಜಾಗೃತಿ ಜಾಥ ಸ್ಥಬ್ದಚಿತ್ರಗಳ ರಥದೊಂದಿಗೆ ತಾಲ್ಲೂಕಿನ ಕೈವಾರ, ಕೋನಪ್ಪಲ್ಲಿ, ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಬಂದಾಗ ಅದ್ದೂರಿ ಸ್ವಾಗತ ನೀಡಲಾಯಿತು. ಮಹಿಳೆಯರು ಕಳಶ ಹೊತ್ತು ಪೂರ್ಣಕುಂಭಗಳೊಂದಿಗೆ ಬರಮಾಡಿಕೊಂಡರು.</p>.<p>ವಿವಿಧ ಕಲಾತಂಡಗಳ ಕಲಾವಿದರು ವಿವಿಧ ನೃತ್ಯ, ಕೋಲಾಟ ನಡೆಸಿಕೊಟ್ಟರು. ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ವೇಷಧಾರಿಗಳು ನೋಡುಗರ ಕಣ್ಮನ ಸೆಳೆದರು.</p>.<p>ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ, ಸದಸ್ಯ ಅಂಬರೀಶ್, ಶೈಲಜಾ ಮಂಜುನಾಥ್, ಅಭಿವೃದ್ಧಿ ಅಧಿಕಾರಿ ಕರಿಬಸಪ್ಪ, ಕಲಾವಿದ ಮುನಿರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟ್ಟೈಸುವ ಜೋಡಣೆ ಎಂದು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯ್ಕ್ ತಿಳಿಸಿದರು.</p>.<p>ತಾಲ್ಲೂಕಿನ ಕೈವಾರ, ಮಸ್ತೇನಹಳ್ಳಿ, ಕೋನಪ್ಪಲ್ಲಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಶನಿವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಮಾತನಾಡಿದರು.</p>.<p>ಪೀಠಿಕೆಯ ಮೊದಲ ಪದಗಳು ನಾವು, ಜನಗಳು. ಭಾರತದಲ್ಲಿ ಅಧಿಕಾರ ಜನಗಳ ಕೈಯಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೊಬ್ಬ ನಾಗರಿಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ ಎಂದರು.</p>.<p>ಸಂವಿಧಾನ ಜಾಗೃತಿ ಜಾಥ ಸ್ಥಬ್ದಚಿತ್ರಗಳ ರಥದೊಂದಿಗೆ ತಾಲ್ಲೂಕಿನ ಕೈವಾರ, ಕೋನಪ್ಪಲ್ಲಿ, ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಬಂದಾಗ ಅದ್ದೂರಿ ಸ್ವಾಗತ ನೀಡಲಾಯಿತು. ಮಹಿಳೆಯರು ಕಳಶ ಹೊತ್ತು ಪೂರ್ಣಕುಂಭಗಳೊಂದಿಗೆ ಬರಮಾಡಿಕೊಂಡರು.</p>.<p>ವಿವಿಧ ಕಲಾತಂಡಗಳ ಕಲಾವಿದರು ವಿವಿಧ ನೃತ್ಯ, ಕೋಲಾಟ ನಡೆಸಿಕೊಟ್ಟರು. ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ವೇಷಧಾರಿಗಳು ನೋಡುಗರ ಕಣ್ಮನ ಸೆಳೆದರು.</p>.<p>ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ, ಸದಸ್ಯ ಅಂಬರೀಶ್, ಶೈಲಜಾ ಮಂಜುನಾಥ್, ಅಭಿವೃದ್ಧಿ ಅಧಿಕಾರಿ ಕರಿಬಸಪ್ಪ, ಕಲಾವಿದ ಮುನಿರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>