<p><strong>ಚೇಳೂರು:</strong> ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಸಂವಿಧಾನ ಜಾಗೃತಿ ಜಾಥಾವು ಎತ್ತಿನ ಬಂಡಿ ಮೂಲಕ ಗಡಿಗವಾರಹಳ್ಳಿ ಗ್ರಾಮಕ್ಕೆ ಪ್ರವೇಶಿಸಿತು. ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು.</p>.<p>ಶಾಲಾ ಮಕ್ಕಳು ವಿವಿಧ ರೀತಿಯ ವೇಷಭೂಷಣ ತೊಟ್ಟು ಕಾಲ್ನಡಿಗೆ ಹಾಗೂ ಎತ್ತಿನ ಗಾಡಿ ಮೂಲಕ ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.</p>.<p>ಶಾಲಾ ಪ್ರಾಂಶುಪಾಲರಾದ ನಾಗರತ್ನ ಡಿ.ವಿ ಮಾತನಾಡಿ, ಸಂವಿಧಾನ ಪೀಠಿಕೆ ಬೋಧನೆ ಮಾಡಿ ಸಾರ್ವಜನಿಕರಿಗೆ ಸಂವಿಧಾನದ ಮೌಲ್ಯ ತಿಳಿಸಲಾಗುತ್ತಿದೆ. ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವಂತಹ ವಾತಾವರಣ ನಿರ್ಮಾಣ ಮಾಡಲು ಸಂವಿಧಾನದ ಮಹತ್ವವನ್ನು ತಿಳಿಯಬೇಕು ಎಂದು ಹೇಳಿದರು.</p>.<p>ದಲಿತ ಸೇನೆ ಪ್ರಧಾನ ಕಾರ್ಯದರ್ಶಿ ದೇವರಾಜ್ ಎಂ. ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜತೆಗೆ ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು. ಮಹಾನ್ ನಾಯಕರ ಚರಿತ್ರೆ ಓದಬೇಕು ಎಂದರು.</p>.<p>ಕೆ.ವೆಂಕಟೇಶ್, ವಿ.ಮಂಜುನಾಥ, ವೆಂಕಟಲಕ್ಷ್ಮಮ್ಮ ಎಚ್., ಶರಣಪ್ಪ, ರೆಹಮಾನ್, ಅಕ್ಬರ್, ನಜ್ಮಾ, ಸಂಧ್ಯಾ, ನರೇಶ, ಶ್ರೀಕಾಂತ್, ಅಮಿತ್ ರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಸಂವಿಧಾನ ಜಾಗೃತಿ ಜಾಥಾವು ಎತ್ತಿನ ಬಂಡಿ ಮೂಲಕ ಗಡಿಗವಾರಹಳ್ಳಿ ಗ್ರಾಮಕ್ಕೆ ಪ್ರವೇಶಿಸಿತು. ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು.</p>.<p>ಶಾಲಾ ಮಕ್ಕಳು ವಿವಿಧ ರೀತಿಯ ವೇಷಭೂಷಣ ತೊಟ್ಟು ಕಾಲ್ನಡಿಗೆ ಹಾಗೂ ಎತ್ತಿನ ಗಾಡಿ ಮೂಲಕ ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.</p>.<p>ಶಾಲಾ ಪ್ರಾಂಶುಪಾಲರಾದ ನಾಗರತ್ನ ಡಿ.ವಿ ಮಾತನಾಡಿ, ಸಂವಿಧಾನ ಪೀಠಿಕೆ ಬೋಧನೆ ಮಾಡಿ ಸಾರ್ವಜನಿಕರಿಗೆ ಸಂವಿಧಾನದ ಮೌಲ್ಯ ತಿಳಿಸಲಾಗುತ್ತಿದೆ. ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವಂತಹ ವಾತಾವರಣ ನಿರ್ಮಾಣ ಮಾಡಲು ಸಂವಿಧಾನದ ಮಹತ್ವವನ್ನು ತಿಳಿಯಬೇಕು ಎಂದು ಹೇಳಿದರು.</p>.<p>ದಲಿತ ಸೇನೆ ಪ್ರಧಾನ ಕಾರ್ಯದರ್ಶಿ ದೇವರಾಜ್ ಎಂ. ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜತೆಗೆ ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು. ಮಹಾನ್ ನಾಯಕರ ಚರಿತ್ರೆ ಓದಬೇಕು ಎಂದರು.</p>.<p>ಕೆ.ವೆಂಕಟೇಶ್, ವಿ.ಮಂಜುನಾಥ, ವೆಂಕಟಲಕ್ಷ್ಮಮ್ಮ ಎಚ್., ಶರಣಪ್ಪ, ರೆಹಮಾನ್, ಅಕ್ಬರ್, ನಜ್ಮಾ, ಸಂಧ್ಯಾ, ನರೇಶ, ಶ್ರೀಕಾಂತ್, ಅಮಿತ್ ರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>