ಪೆಟ್ರೋಲ್ ಬಂಕ್ಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಏರ್ ಮೆಷಿನ್ ಕಡ್ಡಾಯವಾಗಿ ಇರಬೇಕು ಎನ್ನುವ ನಿಯಮವಿದೆ. ಗ್ರಾಹಕರಿಂದ ದೂರುಗಳು ಬಂದರೆ ಪರಿಶೀಲಿಸಿ ಬಂಕ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
–ಪಿ.ಸವಿತಾ, ಜಂಟಿ ನಿರ್ದೇಶಕಿ, ಆಹಾರ ಇಲಾಖೆ, ಚಿಕ್ಕಬಳ್ಳಾಪುರ
ನಗರ ಮತ್ತು ತಾಲ್ಲೂಕಿನ ಪೆಟ್ರೋಲ್ ಬಂಕ್ಗಳಲ್ಲಿ ನಿಯಮಗಳ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಮಾಲೀಕರು ರಾಜಾರೋಷವಾಗಿ ಗ್ರಾಹಕರನ್ನು ವಂಚಿಸುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು ಮಾತ್ರ ಕುರುಡರಾಗಿದ್ದಾರೆ. ಇದು ಸಂಶಯಕ್ಕೆ ಕಾರಣವಾಗಿದೆ.
–ವೆಂಕಟೇಶ್, ಹಿರಿಯ ನಾಗರಿಕ, ಚಿಂತಾಮಣಿ
ಪೆಟ್ರೋಲ್ ಬಂಕ್ಗಳ ವಿರುದ್ಧದ ದೂರುಗಳ ಬಗ್ಗೆ ಪ್ರತಿಕ್ರಿಯಿಸಲು ನಮಗೆ ಯಾವುದೇ ಅಧಿಕಾರವಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು.