ನಗರಸಭೆಯಲ್ಲಿ ನಾಗರಿಕರ ಕೆಲಸ ನಡೆಯುತ್ತಿಲ್ಲ. ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ. ಕಚೇರಿಯಲ್ಲಿ ಕಡತಗಳು ನಾಪತ್ತೆಯಾಗುತ್ತಿವೆ. ಇ-ಸ್ವತ್ತು, ಖಾತೆ ಬದಲಾವಣೆಗೆ ಅರ್ಜಿ ನೀಡಿ, ಅರ್ಜಿದಾರರು ನೇರವಾಗಿ ಭೇಟಿ ಮಾಡಿದರೆ ಕೆಲಸ ಆಗುವುದಿಲ್ಲ. ಕುಂಟುನೆಪ ಹೇಳಿಕೊಂಡು ತಿಂಗಳುಗಟ್ಟಲೇ ಅಲೆದಾಡಿಸುತ್ತಾರೆ. ಇನ್ನೂ ಹೆಚ್ಚಿನ ಒತ್ತಡ ಹೇರಿ ಜೋರಾಗಿ ಮಾತನಾಡಿದರೆ ಕಡತವನ್ನೇ ನಾಪತ್ತೆ ಮಾಡುತ್ತಾರೆ. ಮಧ್ಯವರ್ತಿಗಳ ಮೂಲಕ ಹೋದರೆ ಸುಲಭವಾಗಿ ಕೆಲಸವಾಗುತ್ತದೆ ಎಂದು ಆರೋಪಿಸಿದರು.