ಅಂಜುಮನಿ ಜಾಪ್ರಿಯಾ ಸಮಿತಿಯ ಅಧ್ಯಕ್ಷ ಹಾಷಿಮಿ ರಜಾ ಮಾತನಾಡಿ, ಕೊರೊನಾ ದೃಢವಾದ ಎಲ್ಲರನ್ನು ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರೂ ಆರೋಗ್ಯದಿಂದ ಇದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಆರೋಗ್ಯ ಅಧಿಕಾರಿಗಳ ಸಲಹೆ ಸೂಚನೆಗಳನ್ನು ತಪ್ಪದೆ ಪಾಲನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುತ್ತೇವೆ ಎಂದರು.