‘ಜನರು ಸ್ವಯಂಪ್ರೇರಿತವಾಗಿ ಗೃಹಬಂಧನಕ್ಕೆ ಒಳಗಾಗಬೇಕು. ಭಯ ಬೇಡ, ಎಚ್ಚರಿಕೆ ಇರಲಿ, ಅನಗತ್ಯವಾಗಿ ಹೊರಗೆ ಬರಬಾರದು. ಸೋಂಕು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ಮಾಡಲಾಗುತ್ತಿದೆ. ವಾರ್ಡ್ಗಳು ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಹೊರ ರಾಜ್ಯ, ಜಿಲ್ಲೆ, ತಾಲ್ಲೂಕುಗಳಿಂದ ಬರದಂತೆ ನೋಡಿಕೊಳ್ಳಬೇಕು. ಹೊಸಬರು ಬಂದರೆ ಸಹಾಯವಾಣಿಗೆ, ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರು ಹೆಸರನ್ನು ಗೋಪ್ಯವಾಗಿ ಇಡಲಾಗುವುದು’ ಎಂದು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯರೆಡ್ಡಿ ತಿಳಿಸಿದ್ದಾರೆ.