ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ನಿಂದ ಪರಾರಿಯಾದ ಲಾರಿ ಚಾಲಕನ ಬಂಧನ

Last Updated 24 ಮೇ 2020, 16:54 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಿದ್ದ ಸಂತೆ ಮೈದಾನದ ಲಾರಿ ಚಾಲಕ ಪರಾರಿಯಾಗಿದ್ದರಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ‌ಅಧಿಕಾರಿಗಳು‌ ಆತಂಕಕ್ಕೆ ಒಳಗಾಗಿದ್ದರು. ಬಳಿಕ ಪತ್ತೆಹಚ್ಚಿ ಬಂಧಿಸಿ ಪುನಃ ಕ್ವಾರಂಟೈನ್‌ಗೆ ಒಳಪಡಿಸಿದ್ದಾರೆ.

ಇತ್ತೀಚೆಗೆ ‌ನಗರದ ಲಾರಿ ಚಾಲಕ ಸರಕು ಸಾಮಗ್ರಿಗಳನ್ನು ‌ತುಂಬಿಕೊಂಡು ಉತ್ತರ ಪ್ರದೇಶಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ಸಾದ ನಂತರ ನಗರದಲ್ಲಿ ಎಲ್ಲೆಂದರಲ್ಲೆ ಸುತ್ತಾಡುತ್ತಿದ್ದರು.

ಇದರಿಂದ ಭಯಗೊಂಡ ನಾಗರಿಕರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ವಶಕ್ಕೆ ಪಡೆದು ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದರು.

ಕ್ವಾರಂಟೈನ್‌ ಸ್ಥಳದಿಂದ ಪರಾರಿಯಾಗಿ ಲಾರಿಯಲ್ಲಿ‌ ಬೆಂಗಳೂರಿನತ್ತ ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ತೊಂಡೇಬಾವಿ ಬಳಿ ವಶಕ್ಕೆ ಪಡೆದು ಪುನಃ ಆಸ್ಪತ್ರೆಯಲ್ಲಿ ಪೊಲೀಸರ ಬಿಗಿ ಕಾವಲಿನ ನಡುವೆ ಕ್ವಾರಂಟೈನ್‌ಗೆ ಒಳಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT