<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಮಂಗಳವಾರ 59 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2646 ಕ್ಕೆ ಏರಿಕೆಯಾಗಿದೆ.</p>.<p>ಕಳೆದ ವಾರ ಪ್ರತಿದಿನ ನೂರರ ಗಡಿಯಲ್ಲಿದ್ದ ಕೋವಿಡ್ 19 ಪ್ರಕರಣಗಳು ಈಗ ಇಳಿಕೆಯಾಗುತ್ತಿರುವುದರಿಂದ ಅಧಿಕಾರಿಗಳು ಮತ್ತು ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೂ ಅಧಿಕಾರಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಾ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.</p>.<p>ನಗರ ಮತ್ತು ಗ್ರಾಮೀಣ ಭಾಗದ ಬಹುತೇಕ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳು, ದೇವಸ್ಥಾನ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಿ, ನಡುವೆ ಅಂತರ ಕಾಪಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.</p>.<p class="Briefhead"><strong>ಚಿಂತಾಮಣಿ: 26 ಮಂದಿಗೆ ಸೋಂಕು</strong></p>.<p><strong>ಚಿಂತಾಮಣಿ: </strong>ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು ಆರ್ಟಿಪಿಸಿಎಲ್ ಪರೀಕ್ಷೆಯಿಂದ ನಗರದಲ್ಲಿ 15 ಹಾಗೂ ಗ್ರಾಮೀಣ ಭಾಗದಲ್ಲಿ 11 ಮಂದಿ ಸೇರಿ ಮಂಗಳವಾರ ಒಟ್ಟು 26ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ</p>.<p>ನಗರದ ದೊಡ್ಡಪೇಟೆಯಲ್ಲಿ 3, ಮೆಹಬೂಬ್ ನಗರದಲ್ಲಿ 2, ನಾರಸಿಂಹಪೇಟೆಯಲ್ಲಿ 1, ಕೆ.ಆರ್. ಬಡಾವಣೆಯಲ್ಲಿ 1, ಅಗ್ರಹಾರದಲ್ಲಿ 2, ವೆಂಕಟೇಶ್ವರ ಬಡಾವಣೆಯಲ್ಲಿ 2, ವೆಂಕಟಗಿರಿಕೋಟೆಯಲ್ಲಿ 1, ಅಂಜನಿ ಬಡಾವಣೆಯಲ್ಲಿ 2, ಕೆ.ಜಿ.ಎನ್ ಬಡಾವಣೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.</p>.<p>ತಾಲ್ಲೂಕಿನ ಯಸಗಲಹಳ್ಳಿ 1, ಕೆಂಪದೇನಹಳ್ಳಿ 3, ಬುರುಡಗುಂಟೆ 1, ಮಡಬಹಳ್ಳಿ 2, ನೆರನಕಲ್ಲು-1, ಕೆಂದನಹಳ್ಳಿ 1, ವೈಜಕೂರು 1, ಕನಂಪಲ್ಲಿ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ. ತಾಲ್ಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಕಚೇರಿಯನ್ನು 3 ದಿನ ಸೀಲ್ಡೌನ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಮಂಗಳವಾರ 59 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2646 ಕ್ಕೆ ಏರಿಕೆಯಾಗಿದೆ.</p>.<p>ಕಳೆದ ವಾರ ಪ್ರತಿದಿನ ನೂರರ ಗಡಿಯಲ್ಲಿದ್ದ ಕೋವಿಡ್ 19 ಪ್ರಕರಣಗಳು ಈಗ ಇಳಿಕೆಯಾಗುತ್ತಿರುವುದರಿಂದ ಅಧಿಕಾರಿಗಳು ಮತ್ತು ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೂ ಅಧಿಕಾರಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಾ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.</p>.<p>ನಗರ ಮತ್ತು ಗ್ರಾಮೀಣ ಭಾಗದ ಬಹುತೇಕ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳು, ದೇವಸ್ಥಾನ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಿ, ನಡುವೆ ಅಂತರ ಕಾಪಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.</p>.<p class="Briefhead"><strong>ಚಿಂತಾಮಣಿ: 26 ಮಂದಿಗೆ ಸೋಂಕು</strong></p>.<p><strong>ಚಿಂತಾಮಣಿ: </strong>ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು ಆರ್ಟಿಪಿಸಿಎಲ್ ಪರೀಕ್ಷೆಯಿಂದ ನಗರದಲ್ಲಿ 15 ಹಾಗೂ ಗ್ರಾಮೀಣ ಭಾಗದಲ್ಲಿ 11 ಮಂದಿ ಸೇರಿ ಮಂಗಳವಾರ ಒಟ್ಟು 26ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ</p>.<p>ನಗರದ ದೊಡ್ಡಪೇಟೆಯಲ್ಲಿ 3, ಮೆಹಬೂಬ್ ನಗರದಲ್ಲಿ 2, ನಾರಸಿಂಹಪೇಟೆಯಲ್ಲಿ 1, ಕೆ.ಆರ್. ಬಡಾವಣೆಯಲ್ಲಿ 1, ಅಗ್ರಹಾರದಲ್ಲಿ 2, ವೆಂಕಟೇಶ್ವರ ಬಡಾವಣೆಯಲ್ಲಿ 2, ವೆಂಕಟಗಿರಿಕೋಟೆಯಲ್ಲಿ 1, ಅಂಜನಿ ಬಡಾವಣೆಯಲ್ಲಿ 2, ಕೆ.ಜಿ.ಎನ್ ಬಡಾವಣೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.</p>.<p>ತಾಲ್ಲೂಕಿನ ಯಸಗಲಹಳ್ಳಿ 1, ಕೆಂಪದೇನಹಳ್ಳಿ 3, ಬುರುಡಗುಂಟೆ 1, ಮಡಬಹಳ್ಳಿ 2, ನೆರನಕಲ್ಲು-1, ಕೆಂದನಹಳ್ಳಿ 1, ವೈಜಕೂರು 1, ಕನಂಪಲ್ಲಿ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ. ತಾಲ್ಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಕಚೇರಿಯನ್ನು 3 ದಿನ ಸೀಲ್ಡೌನ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>