<p><strong>ಶಿಡ್ಲಘಟ್ಟ: </strong>‘ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅಧಿಕಾರಿಗಳ ಪರಿಶ್ರಮದಿಂದ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.</p>.<p>ನಗರದ ರಾಜೀವಗಾಂಧಿ ಲೇಔಟ್ನ ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ಶನಿವಾರ ಸಾರ್ವಜನಿಕ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ರೋಗ ಪತ್ತೆಯಾದರೆ ಚಿಕಿತ್ಸೆ ಪಡೆಯಲು ನಿರ್ಲಕ್ಷ್ಯವಹಿಸಬಾರದು ಎಂದು ಹೇಳಿದರು.</p>.<p>ಕೊರೊನಾ ಸೋಂಕು ದೃಢಪಟ್ಟರೆ ಹದಿನೈದು ದಿನ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಆತಂಕದಿಂದ ಮನೆಯಲ್ಲಿಯೇ ಇದ್ದುಬಿಡಬೇಡಿ. ಕೊರೊನಾಗಿಂತಲೂ ಮಧುಮೇಹ, ರಕ್ತದೊತ್ತಡ ಮೊದಲಾದ ಕಾಯಿಲೆ ಬರುತ್ತವೆ. ಅವುಗಳಿಗೆ ಸೂಕ್ತ ಚಿಕಿತ್ಸೆ ಅಗತ್ಯ. ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.</p>.<p>ಶಿಡ್ಲಘಟ್ಟದ ಕುರುಬರಪೇಟೆಯಲ್ಲಿ ನವೆಂಬರ್ 13ರಂದು ದಂತವೈದ್ಯರು, ಇಲಾಹಿ ನಗರದಲ್ಲಿ ನವೆಂಬರ್ 24ರಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು, ಫಿಲೇಚರ್ ಕ್ವಾಟರ್ಸ್ನಲ್ಲಿ ಡಿಸೆಂಬರ್ 4 ರಂದು ಮೂಳೆತಜ್ಞರು, ರಹಮತ್ ನಗರದಲ್ಲಿ ಡಿಸೆಂಬರ್ 11ರಂದು ಪ್ರಸೂತಿ ತಜ್ಞರು ಮತ್ತು ಸಿದ್ಧಾರ್ಥನಗರದಲ್ಲಿ ಡಿಸೆಂಬರ್ 18ರಂದು ಕಣ್ಣಿನ ತಜ್ಞರು ಉಚಿತವಾಗಿ ಚಿಕಿತ್ಸೆ ನೀಡಲಿದ್ದಾರೆ ಎಂದರು.</p>.<p>ಸರ್ಕಾರಿ ಆಸ್ಪತ್ರೆಯ ಡಾ.ಗುರು, ಡಾ.ನಿರಂಜನ್, ಬಾಬಾ ಫಕ್ರುದ್ದೀನ್, ಮುನಿಲಕ್ಷ್ಮಮ್ಮ, ಗೀತಾ, ನಂದಿನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>‘ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅಧಿಕಾರಿಗಳ ಪರಿಶ್ರಮದಿಂದ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.</p>.<p>ನಗರದ ರಾಜೀವಗಾಂಧಿ ಲೇಔಟ್ನ ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ಶನಿವಾರ ಸಾರ್ವಜನಿಕ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ರೋಗ ಪತ್ತೆಯಾದರೆ ಚಿಕಿತ್ಸೆ ಪಡೆಯಲು ನಿರ್ಲಕ್ಷ್ಯವಹಿಸಬಾರದು ಎಂದು ಹೇಳಿದರು.</p>.<p>ಕೊರೊನಾ ಸೋಂಕು ದೃಢಪಟ್ಟರೆ ಹದಿನೈದು ದಿನ ಕ್ವಾರಂಟೈನ್ ಆಗಬೇಕಾಗುತ್ತದೆ ಎಂಬ ಆತಂಕದಿಂದ ಮನೆಯಲ್ಲಿಯೇ ಇದ್ದುಬಿಡಬೇಡಿ. ಕೊರೊನಾಗಿಂತಲೂ ಮಧುಮೇಹ, ರಕ್ತದೊತ್ತಡ ಮೊದಲಾದ ಕಾಯಿಲೆ ಬರುತ್ತವೆ. ಅವುಗಳಿಗೆ ಸೂಕ್ತ ಚಿಕಿತ್ಸೆ ಅಗತ್ಯ. ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.</p>.<p>ಶಿಡ್ಲಘಟ್ಟದ ಕುರುಬರಪೇಟೆಯಲ್ಲಿ ನವೆಂಬರ್ 13ರಂದು ದಂತವೈದ್ಯರು, ಇಲಾಹಿ ನಗರದಲ್ಲಿ ನವೆಂಬರ್ 24ರಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು, ಫಿಲೇಚರ್ ಕ್ವಾಟರ್ಸ್ನಲ್ಲಿ ಡಿಸೆಂಬರ್ 4 ರಂದು ಮೂಳೆತಜ್ಞರು, ರಹಮತ್ ನಗರದಲ್ಲಿ ಡಿಸೆಂಬರ್ 11ರಂದು ಪ್ರಸೂತಿ ತಜ್ಞರು ಮತ್ತು ಸಿದ್ಧಾರ್ಥನಗರದಲ್ಲಿ ಡಿಸೆಂಬರ್ 18ರಂದು ಕಣ್ಣಿನ ತಜ್ಞರು ಉಚಿತವಾಗಿ ಚಿಕಿತ್ಸೆ ನೀಡಲಿದ್ದಾರೆ ಎಂದರು.</p>.<p>ಸರ್ಕಾರಿ ಆಸ್ಪತ್ರೆಯ ಡಾ.ಗುರು, ಡಾ.ನಿರಂಜನ್, ಬಾಬಾ ಫಕ್ರುದ್ದೀನ್, ಮುನಿಲಕ್ಷ್ಮಮ್ಮ, ಗೀತಾ, ನಂದಿನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>