ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊರೊನಾ ಸೋಂಕು ಉದಾಸೀನತೆ ಬೇಡ’

Last Updated 24 ನವೆಂಬರ್ 2020, 3:33 IST
ಅಕ್ಷರ ಗಾತ್ರ

ಚಿಂತಾಮಣಿ: ‘ಕೋವಿಡ್-19 ಕಡಿಮೆಯಾಗುತ್ತದೆ ಎಂದು ಜನರು ಮೈಮರೆಯಬಾರದು. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಂ. ರಾಜೇಂದ್ರಕುಮಾರ್ ಹೇಳಿದರು.

ನಗರದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊರೊನಾ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

ವಿದೇಶಗಳು ಹಾಗೂ ದೇಶದ ಹಲವಾರು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ತನ್ನ ಕಬಂಧಬಾಹುಗಳನ್ನು ಚಾಚುತ್ತಿದೆ. ಹೀಗಾಗಿ ಜನರು ಉದಾಸೀನತೆ ತೋರಬಾರದು. ಆರೋಗ್ಯವಂತರಾಗಿರಬೇಕಾದರೆ ಜಾಗೃತರಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಒಬ್ಬರಿಂದ ಒಬ್ಬರಿಗೆ ಕೊರೊನಾ ಅಟ್ಟಹಾಸವನ್ನು ಮೆರೆಯುತ್ತದೆ. ಅದನ್ನು ಮಟ್ಟಹಾಕಬೇಕಾದರೆ ಸದ್ಯಕ್ಕೆ ಜಾಗೃತಿಯೇ ಮಾರ್ಗವಾಗಿದೆ. ಕೊರೊನಾ ಮಾರ್ಗಸೂಚಿ ಪಾಲಿಸುವುದರ ಜತೆಗೆ ಸುತ್ತಮುತ್ತಲಿನ ಜನರಿಗೂ ಮಾಹಿತಿ ನೀಡಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್ ಮಾತನಾಡಿ, ಅಂಗಡಿಗಳ ಮುಂದೆ ಗುಂಪುಗಾರಿಕೆಗೆ ಅವಕಾಶ ನೀಡಬೇಡಿ. ಗ್ರಾಹಕರು ಅಂತರವನ್ನು ಕಾಪಾಡಿಕೊಡಿಕೊಂಡು ನಿಂತುಕೊಳ್ಳಲು ತಿಳಿಸಬೇಕು. ಆದಷ್ಟು ಜಾಗ್ರತೆಯಾಗಿ ಅವರಿಗೆ ಬೇಕಾದ ವಸ್ತುಗಳನ್ನು ನೀಡಿ ಕಳುಹಿಸಬೇಕು. ಅಂಗಡಿಗಳ ಬಳಿ ಸ್ವಚ್ಛತೆ ಕಾಪಾಡಬೇಕು. ಮಾಲೀಕರು ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ನಗರದ ಪ್ರವಾಸಿಮಂದಿರದಿಂದ ನ್ಯಾಯಾಧೀಶರು ಪಾದಯಾತ್ರೆ ನಡೆಸಿದರು. ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ, ಉಪಾಧ್ಯಕ್ಷ ಶಿವಾನಂದ್, ಸಬ್ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT