<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಾಪಾಸಾಗಿರುವ ಕಾರ್ಮಿಕರ ಪೈಕಿ ಶನಿವಾರ ಮತ್ತೆ ಇಬ್ಬರಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.</p>.<p>ಜಿಲ್ಲೆಗೆ ಮುಂಬೈನಿಂದ ವಾಪಾಸಾಗಿರುವ 338 ಕಾರ್ಮಿಕರ ಪೈಕಿ ಈವರೆಗೆ 334 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 117 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಶನಿವಾರ ಗೌರಿಬಿದನೂರು ತಾಲ್ಲೂಕಿನ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>ಸೋಂಕಿತರ ಪೈಕಿ ಚಿಕ್ಕಬಳ್ಳಾಪುರದ ಇಬ್ಬರು, ಗೌರಿಬಿದನೂರಿನ ಒಬ್ಬರು ಮೃತಪಟ್ಟಿದ್ದಾರೆ. ಶನಿವಾರ ಒಂದೇ ದಿನ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾದ 19 ಜನರನ್ನು ಬಿಡುಗಡೆಗೊಳಿಸಿ, ಬೇರೆಡೆ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈವರೆಗೆ 74 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.</p>.<p>ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 73 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ 11,338 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 10,243 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಇನ್ನುಳಿದಂತೆ ಗೌರಿಬಿದನೂರಿನ 84, ಬಾಗೇಪಲ್ಲಿಯ 49, ಚಿಕ್ಕಬಳ್ಳಾಪುರದ 11 ಮತ್ತು ಚಿಂತಾಮಣಿಯ 6 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಾಪಾಸಾಗಿರುವ ಕಾರ್ಮಿಕರ ಪೈಕಿ ಶನಿವಾರ ಮತ್ತೆ ಇಬ್ಬರಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.</p>.<p>ಜಿಲ್ಲೆಗೆ ಮುಂಬೈನಿಂದ ವಾಪಾಸಾಗಿರುವ 338 ಕಾರ್ಮಿಕರ ಪೈಕಿ ಈವರೆಗೆ 334 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 117 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಶನಿವಾರ ಗೌರಿಬಿದನೂರು ತಾಲ್ಲೂಕಿನ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>ಸೋಂಕಿತರ ಪೈಕಿ ಚಿಕ್ಕಬಳ್ಳಾಪುರದ ಇಬ್ಬರು, ಗೌರಿಬಿದನೂರಿನ ಒಬ್ಬರು ಮೃತಪಟ್ಟಿದ್ದಾರೆ. ಶನಿವಾರ ಒಂದೇ ದಿನ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾದ 19 ಜನರನ್ನು ಬಿಡುಗಡೆಗೊಳಿಸಿ, ಬೇರೆಡೆ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈವರೆಗೆ 74 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.</p>.<p>ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 73 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ 11,338 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 10,243 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಇನ್ನುಳಿದಂತೆ ಗೌರಿಬಿದನೂರಿನ 84, ಬಾಗೇಪಲ್ಲಿಯ 49, ಚಿಕ್ಕಬಳ್ಳಾಪುರದ 11 ಮತ್ತು ಚಿಂತಾಮಣಿಯ 6 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>