ಇದರ ಬೆನ್ನಲ್ಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ಮತ್ತು ವಿಶೇಷವಾಗಿ ಗೌರಿಬಿದನೂರಿನಲ್ಲಿ ಲಾಕ್ಡೌನ್ ಅನುಷ್ಠಾನ ಮತ್ತಷ್ಟು ಬಿಗಿಗೊಳಿಸಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಹಿರಿಯ ಅಧಿಕಾರಿಗಳು ಗೌರಿಬಿದನೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಪರಿಸ್ಥಿತಿ ಹತೋಟಿಗೆ ತರುವ ಕ್ರಮಗಳ ಕುರಿತು ಚರ್ಚೆ ನಡೆಸಿದರು.