<p><strong>ಚಿಕ್ಕಬಳ್ಳಾಪುರ: </strong>ರಿಸಲ್ಟ್ (ಫಲಿತಾಂಶ) ಬಂದಾಯ್ತಲ್ಲ -ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಪ್ರತಿಕ್ರಿಯೆ.</p>.<p>ತಾಲ್ಲೂಕಿನ ನಂದಿಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬಂಧ ಸ್ಥಳ ಪರಿಶೀಲನೆಗೆ ಬಂದಿರುವ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಯಡಿಯೂರಪ್ಪ ಅವರ ಬದಲಾವಣೆಗೆ ಪರೀಕ್ಷೆ ಬರೆದವರು ನೀವು ಎಂದು ಕೇಳಿದ್ದಕ್ಕೆ ಅವರು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.</p>.<p>ಬಿ.ವೈ.ವಿಜಯೇಂದ್ರ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯೋಗೀಶ್ವರ್, ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದರು.</p>.<p>ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ಸ್ಪಷ್ಟವಾಗಿ ನಿರಾಕರಿಸಿದರು. ಹೈಕಮಾಂಡ್ ನೋಡಿಕೊಳ್ಳುತ್ತದೆ, ನನಗೇಗೂ ಗೊತ್ತಿಲ್ಲ ಎಂದರು. ಅಂತಿಮವಾಗಿ ರಿಸಲ್ಟ್ ಬಂದಾಗಿದೆಯಲ್ಲ ಎಂದರು.</p>.<p>ಕುಮಾರಸ್ವಾಮಿ ಅವರು ಬೇಕಾದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲಸಗಳನ್ನು ಮಾಡಿಸಿಕೊಳ್ಳುವರು. ನಂತರ ಅವರನ್ನೇ ದೂಷಿಸುವರು ಎಂದರು.</p>.<p><strong>ಇದನ್ನೂ ಓದಿ... </strong><a href="https://www.prajavani.net/district/ramanagara/karnataka-politics-hd-kumaraswamy-bs-yediyurappa-cp-yogeshwar-bjp-jds-850852.html" target="_blank">ಯೋಗೇಶ್ವರ್ಗೆ ಏನು ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ: ಕುಮಾರಸ್ವಾಮಿ ತಿರುಗೇಟು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ರಿಸಲ್ಟ್ (ಫಲಿತಾಂಶ) ಬಂದಾಯ್ತಲ್ಲ -ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಪ್ರತಿಕ್ರಿಯೆ.</p>.<p>ತಾಲ್ಲೂಕಿನ ನಂದಿಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬಂಧ ಸ್ಥಳ ಪರಿಶೀಲನೆಗೆ ಬಂದಿರುವ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಯಡಿಯೂರಪ್ಪ ಅವರ ಬದಲಾವಣೆಗೆ ಪರೀಕ್ಷೆ ಬರೆದವರು ನೀವು ಎಂದು ಕೇಳಿದ್ದಕ್ಕೆ ಅವರು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.</p>.<p>ಬಿ.ವೈ.ವಿಜಯೇಂದ್ರ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯೋಗೀಶ್ವರ್, ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದರು.</p>.<p>ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ಸ್ಪಷ್ಟವಾಗಿ ನಿರಾಕರಿಸಿದರು. ಹೈಕಮಾಂಡ್ ನೋಡಿಕೊಳ್ಳುತ್ತದೆ, ನನಗೇಗೂ ಗೊತ್ತಿಲ್ಲ ಎಂದರು. ಅಂತಿಮವಾಗಿ ರಿಸಲ್ಟ್ ಬಂದಾಗಿದೆಯಲ್ಲ ಎಂದರು.</p>.<p>ಕುಮಾರಸ್ವಾಮಿ ಅವರು ಬೇಕಾದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲಸಗಳನ್ನು ಮಾಡಿಸಿಕೊಳ್ಳುವರು. ನಂತರ ಅವರನ್ನೇ ದೂಷಿಸುವರು ಎಂದರು.</p>.<p><strong>ಇದನ್ನೂ ಓದಿ... </strong><a href="https://www.prajavani.net/district/ramanagara/karnataka-politics-hd-kumaraswamy-bs-yediyurappa-cp-yogeshwar-bjp-jds-850852.html" target="_blank">ಯೋಗೇಶ್ವರ್ಗೆ ಏನು ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ: ಕುಮಾರಸ್ವಾಮಿ ತಿರುಗೇಟು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>