ಚಿಕ್ಕಬಳ್ಳಾಪುರ: ರಿಸಲ್ಟ್ (ಫಲಿತಾಂಶ) ಬಂದಾಯ್ತಲ್ಲ -ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಪ್ರತಿಕ್ರಿಯೆ.
ತಾಲ್ಲೂಕಿನ ನಂದಿಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬಂಧ ಸ್ಥಳ ಪರಿಶೀಲನೆಗೆ ಬಂದಿರುವ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು.
ಯಡಿಯೂರಪ್ಪ ಅವರ ಬದಲಾವಣೆಗೆ ಪರೀಕ್ಷೆ ಬರೆದವರು ನೀವು ಎಂದು ಕೇಳಿದ್ದಕ್ಕೆ ಅವರು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.
ಬಿ.ವೈ.ವಿಜಯೇಂದ್ರ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯೋಗೀಶ್ವರ್, ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದರು.
ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ಸ್ಪಷ್ಟವಾಗಿ ನಿರಾಕರಿಸಿದರು. ಹೈಕಮಾಂಡ್ ನೋಡಿಕೊಳ್ಳುತ್ತದೆ, ನನಗೇಗೂ ಗೊತ್ತಿಲ್ಲ ಎಂದರು. ಅಂತಿಮವಾಗಿ ರಿಸಲ್ಟ್ ಬಂದಾಗಿದೆಯಲ್ಲ ಎಂದರು.
ಕುಮಾರಸ್ವಾಮಿ ಅವರು ಬೇಕಾದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲಸಗಳನ್ನು ಮಾಡಿಸಿಕೊಳ್ಳುವರು. ನಂತರ ಅವರನ್ನೇ ದೂಷಿಸುವರು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.