<p><strong>ಬಾಗೇಪಲ್ಲಿ</strong>: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ಪಕ್ಷ ಸೋತಿದೆ. ಆದರೆ, ಕ್ಷೇತ್ರದಲ್ಲಿ ಸಿಪಿಎಂ ಸತ್ತಿಲ್ಲ. ಜನರ ಬಲಿಷ್ಠ ಸಂಘಟನೆಯಿಂದ ಮುಂದೊಮ್ಮೆ ಸಿಪಿಎಂ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಈ ಮೂಲಕ ಜನರ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.</p>.<p>ಪಟ್ಟಣದ ಸುಂದರಯ್ಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕ್ಷೇತ್ರದಲ್ಲಿ ಸಿಪಿಎಂ ಹಲವಾರು ಕಾರಣಗಳಿಂದ ಸೋತಿದೆ. ಜನಸಾಮಾನ್ಯರು, ಕೃಷಿಕೂಲಿಕಾರ್ಮಿಕರು ಇರುವವರೆಗೆ ಕೆಂಬಾವುಟದ ಮೂಲಕ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಲಿದೆ. ಕ್ಷೇತ್ರದಲ್ಲಿ ಸಿಪಿಎಂ ಇಲ್ಲ ಎನ್ನುವವರಿಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದರು.</p>.<p>ರಾಜ್ಯ ಮತ್ತು ಕ್ಷೇತ್ರದಲ್ಲಿ ಸಿಪಿಎಂ ಪಕ್ಷ ಪರ್ಯಾಯ ರಾಜಕೀಯ ಮತ್ತು ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲು ನ. 1ರಿಂದ ಡಿ. 15ರವರೆಗೆ ಮನೆ ಮನೆಗೆ ಭೇಟಿ ನೀಡಲಾಗಿದೆ. ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲ್ಲೂಕುಗಳ 7 ಜಿಲ್ಲಾ ಪಂಚಾತಿಗಳಲ್ಲಿ, 19 ತಾಲ್ಲೂಕು ಪಂಚಾಯಿತಿಗಳ 12,111 ಮನೆಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಸಂಗ್ರಹಿಸಿದ್ದೇವೆ ಎಂದರು .</p>.<p>ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರು ನಾಗರಾಜ್, ಅಶ್ವತ್ಥಪ್ಪ, ಎಂ.ಎನ್.ರಘುರಾಮರೆಡ್ಡಿ, ಚನ್ನರಾಯಪ್ಪ, ಟೌನ್ ಕೃಷ್ಣಪ್ಪ, ಮುಸ್ತಾಫ, ಚಂಚುರಾಯನಪಲ್ಲಿ ಕೃಷ್ಣಪ್ಪ, ಕೆ.ಮುನಿಯಪ್ಪ, ಬಿ.ಎಚ್.ರಫೀಕ್, ಎ.ಸೋಮಶೇಖರ, ಇಮ್ರಾನ್, ರವಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ಪಕ್ಷ ಸೋತಿದೆ. ಆದರೆ, ಕ್ಷೇತ್ರದಲ್ಲಿ ಸಿಪಿಎಂ ಸತ್ತಿಲ್ಲ. ಜನರ ಬಲಿಷ್ಠ ಸಂಘಟನೆಯಿಂದ ಮುಂದೊಮ್ಮೆ ಸಿಪಿಎಂ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಈ ಮೂಲಕ ಜನರ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.</p>.<p>ಪಟ್ಟಣದ ಸುಂದರಯ್ಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕ್ಷೇತ್ರದಲ್ಲಿ ಸಿಪಿಎಂ ಹಲವಾರು ಕಾರಣಗಳಿಂದ ಸೋತಿದೆ. ಜನಸಾಮಾನ್ಯರು, ಕೃಷಿಕೂಲಿಕಾರ್ಮಿಕರು ಇರುವವರೆಗೆ ಕೆಂಬಾವುಟದ ಮೂಲಕ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಲಿದೆ. ಕ್ಷೇತ್ರದಲ್ಲಿ ಸಿಪಿಎಂ ಇಲ್ಲ ಎನ್ನುವವರಿಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದರು.</p>.<p>ರಾಜ್ಯ ಮತ್ತು ಕ್ಷೇತ್ರದಲ್ಲಿ ಸಿಪಿಎಂ ಪಕ್ಷ ಪರ್ಯಾಯ ರಾಜಕೀಯ ಮತ್ತು ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲು ನ. 1ರಿಂದ ಡಿ. 15ರವರೆಗೆ ಮನೆ ಮನೆಗೆ ಭೇಟಿ ನೀಡಲಾಗಿದೆ. ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲ್ಲೂಕುಗಳ 7 ಜಿಲ್ಲಾ ಪಂಚಾತಿಗಳಲ್ಲಿ, 19 ತಾಲ್ಲೂಕು ಪಂಚಾಯಿತಿಗಳ 12,111 ಮನೆಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಸಂಗ್ರಹಿಸಿದ್ದೇವೆ ಎಂದರು .</p>.<p>ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರು ನಾಗರಾಜ್, ಅಶ್ವತ್ಥಪ್ಪ, ಎಂ.ಎನ್.ರಘುರಾಮರೆಡ್ಡಿ, ಚನ್ನರಾಯಪ್ಪ, ಟೌನ್ ಕೃಷ್ಣಪ್ಪ, ಮುಸ್ತಾಫ, ಚಂಚುರಾಯನಪಲ್ಲಿ ಕೃಷ್ಣಪ್ಪ, ಕೆ.ಮುನಿಯಪ್ಪ, ಬಿ.ಎಚ್.ರಫೀಕ್, ಎ.ಸೋಮಶೇಖರ, ಇಮ್ರಾನ್, ರವಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>