‘ಎಸ್.ಎನ್.ಸುಬ್ಬಾರೆಡ್ಡಿ ಅವರು ಗುಂಜೂರು ಶ್ರೀನಿವಾಸರೆಡ್ಡಿರವರನ್ನು ಏಕವಚನದಲ್ಲಿ ವ್ಯಂಗ್ಯವಾಡಿದ್ದಾರೆ. ಇದರಿಂದ ಕುಪಿತಗೊಂಡ ಯುವಕ ಮಧುಸೂದನರೆಡ್ಡಿ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿರವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾನೂನು ರೀತಿ ಕ್ರಮ ಜರುಗಿಸುತ್ತಾರೆ. ಆದರೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬಾಗೇಪಲ್ಲಿ, ಗುಡಿಬಂಡೆ, ಚೇಳೂರಿನಲ್ಲಿ ಪ್ರತಿಭಟನೆ ಮಾಡಿರುವುದು ಯಾವ ಪುರುಷಾರ್ಥಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ.