‘ವಿದ್ಯಾರ್ಥಿ ಜೀವನ ಎಂಬುದು ನಾಲ್ಕು ಚಕ್ರದ ವಾಹನವಿದ್ದಂತೆ. ಎಲ್ಲ ಚಕ್ರಗಳು ಸುಸ್ಥಿತಿಯಲ್ಲಿದ್ದಾಗ ಮಾತ್ರ ವಾಹನ ಸುಲಭವಾಗಿ ಚಲಿಸಿ ಗುರಿ ಮುಟ್ಟಲು ಸಾಧ್ಯ. ಅದರಂತೆ ಪೋಷಕರು, ಸಮಾಜ, ಶಿಕ್ಷಕರು ಮತ್ತು ಶಾಲೆಯ ಆಡಳಿತ ಮಂಡಳಿ ಎಂಬ ಚಕ್ರಗಳು ಉತ್ತಮ ರೀತಿಯಲ್ಲಿದ್ದರೆ ಮಕ್ಕಳು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಣದ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಸೇವಾ ಕಾರ್ಯ ಶ್ಲಾಘನೀಯವಾಗಿದೆ’ ಎಂದರು.