ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಕ್ಕಲಮಡುಗು ಜಲಾಶಯದಲ್ಲಿ ಮುಳುಗಿ ಸಾವು

Last Updated 25 ಸೆಪ್ಟೆಂಬರ್ 2021, 14:10 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಕ್ಕಲಮಡುಗು ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಶುಕ್ರವಾರ ಸಂಜೆ ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್ (22) ಮೃತಪಟ್ಟಿದ್ದಾರೆ. ರೋಹಿತ್ ಎಂಜಿನಿಯರ್ ಆಗಿದ್ದರು.

ನಾಲ್ಕು ಮಂದಿ ಸ್ನೇಹಿತರ ಜತೆ ಅವರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದರು. ಈ ಗುಂಪಿನಲ್ಲಿದ್ದ ಸ್ನೇಹಿತನ ಜನ್ಮದಿನ ಆಚರಿಸಿದ್ದರು. ನಂತರ ಹಿನ್ನೀರಿನಲ್ಲಿ ಈಜಲು ಮುಂದಾಗಿದ್ದು ಈ ವೇಳೆ ಅವಘಡ ನಡೆದಿದೆ. ಕತ್ತಲಾದ ಕಾರಣ ಶವವನ್ನು ಹೊರತೆಗೆಯಲು ಸಾಧ್ಯವಾಗಿರಲಿಲ್ಲ. ಶನಿವಾರ ಬೆಳಿಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಶವವನ್ನು ಹೊರ ತೆಗೆದರು. ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT