‘ಕೆಮ್ಮು, ನಗೆಡಿ ಇತ್ಯಾದಿ ಮಾತ್ರೆಗಳನ್ನು ಕಾರಾಗೃಹದಲ್ಲಿ ಕೊಡುತ್ತಿದ್ದರು. ಆ ಮಾತ್ರೆಗಳನ್ನೆ ಸಂಗ್ರಹಿಸಿಟ್ಟುಕೊಂಡಿದ್ದ. ಶುಕ್ರವಾರ ರಾತ್ರಿ ಹೋಗಿ ಸಂಗ್ರಹಿಸಿದ್ದ ಮಾತ್ರೆಗಳನ್ನು ನುಂಗಿದ್ದಾನೆ. ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.