<p>ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸುರಿದ ಮಳೆಯಿಂದ ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 74,190 ಮಂದಿ ಪರಿಹಾರ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದು ಇವರಲ್ಲಿ 66,297 ಮಂದಿಗೆ ಪರಿಹಾರ ವಿತರಿಸಲಾಗಿದೆ. ಇದರ ಒಟ್ಟು ಮೊತ್ತ ₹ 35.75 ಕೋಟಿ ಬಿಡುಗಡೆಯಾಗಿದೆ.</p>.<p>ಜಿಲ್ಲೆಯಾದ್ಯಂತ ಬೆಳೆ ಹಾನಿಗೆ ಒಳಗಾದರೈತರ ಬೆಳೆಗಳನ್ನು 4 ಹಂತಗಳಲ್ಲಿ ಪರಿಹಾರ್ ಪೋರ್ಟಲ್ನಲ್ಲಿ ದಾಖಲಿಸಲಾಗಿತ್ತು. ಡಿ.4 ರವರೆಗೆ 16,917 ರೈತರಿಗೆ ₹ 8 ಕೋಟಿ ಪರಿಹಾರ ಹಣ ಬಿಡುಗಡೆ ಆಗಿತ್ತು. ನಂತರ ಡಿ.29ರವರೆಗೆ₹ 35.75 ಕೋಟಿ ಬಿಡುಗಡೆ ಆಗಿದೆ.ಫಲಾನುಭವಿಗಳಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ನೇರ ವರ್ಗಾವಣೆ ಮಾಡಲಾಗಿದೆ.</p>.<p>2021ರ ಜುಲೈ, ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಿತ್ತು. ನಾಲ್ಕು ದಶಕಗಳಲ್ಲಿಯೇ ಅತಿ ಗರಿಷ್ಠ ಪ್ರಮಾಣದ ಮಳೆ ಈ ತಿಂಗಳುಗಳಲ್ಲಿ ಸಂಭವಿಸಿತ್ತು. 90 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತು.</p>.<p>ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ವಿವರ ಸಂಗ್ರಹಿಸಿದ್ದರು.ಜಂಟಿ ಸಮೀಕ್ಷೆಯಿಂದ ಸ್ವೀಕೃತ ಬೆಳೆ ಹಾನಿ ವಿವರವನ್ನು ಪರಿಹಾರ ಪೋರ್ಟಲ್ನಲ್ಲಿ ನಮೂದಿಸಲಾಯಿತು. ಪೋರ್ಟಲ್ನಲ್ಲಿ ಮಾಹಿತಿ ಹಾಗೂ ದತ್ತಾಂಶ ನಮೂದು ಪ್ರಕ್ರಿಯೆ ಡಿ.7ಕ್ಕೆ ಪೂರ್ಣಗೊಂಡಿತು.</p>.<p>1961 ಮನೆಗಳಿಗೆ ಅನುಮೋದನೆ: ಜಿಲ್ಲೆಯಲ್ಲಿ ಭಾರಿ ಮಳೆಗೆ ಹೇರಳ ಸಂಖ್ಯೆಯ ಮನೆಗಳಿಗೆ ಹಾನಿಯಾಗಿದೆ. 1,972 ಮನೆಗಳಿಗೆ ಹಾನಿಯಾಗಿದೆ ಎಂದು ಆಯಾ ತಹಶೀಲ್ದಾರರು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ಇವುಗಳಲ್ಲಿ 1,961 ಮನೆಗಳಿಗೆ ಜಿಲ್ಲಾಧಿಕಾರಿ ಅನುಮೋದನೆ ಕೊಟ್ಟಿದ್ದರು. ಮನೆಗಳ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಒಟ್ಟು ₹ 14.72 ಕೋಟಿ ಬಿಡುಗಡೆ ಮಾಡಬೇಕಾಗಿದ್ದು ₹ 12.28 ಕೋಟಿಯನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ. ಶೇ 83ರಷ್ಟು ಹಣವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ.</p>.<p>2020 ಮತ್ತು 2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮನೆಗಳಿಗೆ ಹಾನಿ ಸಂಭವಿಸಿರಲಿಲ್ಲ. ಆದರೆ 2021ರಲ್ಲಿ ಸುರಿದ ಮಳೆ ಸಾವಿರಾರು ಮನೆಗಳಿಗೆ ಹಾನಿ ಮಾಡಿದೆ.</p>.<p>ಮೂಲಸೌಕರ್ಯಕ್ಕೆ ಹಾನಿ:ಮಳೆ ಬೆಳೆಗಷ್ಟೇ ಹಾನಿ ಮಾಡಿಲ್ಲ. ಜಿಲ್ಲೆಯಲ್ಲಿ ಮೂಲಸೌಕರ್ಯಗಳಿಗೂ ಹೆಚ್ಚಿನ ಹಾನಿಯನ್ನು ಮಾಡಿದೆ. ಒಟ್ಟು ₹ 185.75 ಲಕ್ಷ ಮೊತ್ತದ ಹಾನಿ ಸಂಭವಿಸಿದೆ.</p>.<p>***</p>.<p>ಅಂಕಿ ಅಂಶ</p>.<p>1,972<br />ಮಳೆಯಿಂದ ಹಾನಿಗೆ ಒಳಗಾಗಿರುವ ಮನೆಗಳ ಸಂಖ್ಯೆ</p>.<p>₹ 35.75 ಕೋಟಿ<br />ಬಿಡುಗಡೆಯಾಗಿರುವ ಬೆಳೆ ಪರಿಹಾರದ ಹಣ</p>.<p>₹185.75 ಲಕ್ಷ<br />ಪ್ರವಾಹದಿಂದ ಮೂಲಸೌಕರ್ಯಕ್ಕಾದ ಹಾನಿಯ ಮೊತ್ತ</p>.<p>₹ 843.14 ಲಕ್ಷ<br />ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿರುವ ಅನುದಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸುರಿದ ಮಳೆಯಿಂದ ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 74,190 ಮಂದಿ ಪರಿಹಾರ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದು ಇವರಲ್ಲಿ 66,297 ಮಂದಿಗೆ ಪರಿಹಾರ ವಿತರಿಸಲಾಗಿದೆ. ಇದರ ಒಟ್ಟು ಮೊತ್ತ ₹ 35.75 ಕೋಟಿ ಬಿಡುಗಡೆಯಾಗಿದೆ.</p>.<p>ಜಿಲ್ಲೆಯಾದ್ಯಂತ ಬೆಳೆ ಹಾನಿಗೆ ಒಳಗಾದರೈತರ ಬೆಳೆಗಳನ್ನು 4 ಹಂತಗಳಲ್ಲಿ ಪರಿಹಾರ್ ಪೋರ್ಟಲ್ನಲ್ಲಿ ದಾಖಲಿಸಲಾಗಿತ್ತು. ಡಿ.4 ರವರೆಗೆ 16,917 ರೈತರಿಗೆ ₹ 8 ಕೋಟಿ ಪರಿಹಾರ ಹಣ ಬಿಡುಗಡೆ ಆಗಿತ್ತು. ನಂತರ ಡಿ.29ರವರೆಗೆ₹ 35.75 ಕೋಟಿ ಬಿಡುಗಡೆ ಆಗಿದೆ.ಫಲಾನುಭವಿಗಳಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ನೇರ ವರ್ಗಾವಣೆ ಮಾಡಲಾಗಿದೆ.</p>.<p>2021ರ ಜುಲೈ, ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಿತ್ತು. ನಾಲ್ಕು ದಶಕಗಳಲ್ಲಿಯೇ ಅತಿ ಗರಿಷ್ಠ ಪ್ರಮಾಣದ ಮಳೆ ಈ ತಿಂಗಳುಗಳಲ್ಲಿ ಸಂಭವಿಸಿತ್ತು. 90 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತು.</p>.<p>ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ವಿವರ ಸಂಗ್ರಹಿಸಿದ್ದರು.ಜಂಟಿ ಸಮೀಕ್ಷೆಯಿಂದ ಸ್ವೀಕೃತ ಬೆಳೆ ಹಾನಿ ವಿವರವನ್ನು ಪರಿಹಾರ ಪೋರ್ಟಲ್ನಲ್ಲಿ ನಮೂದಿಸಲಾಯಿತು. ಪೋರ್ಟಲ್ನಲ್ಲಿ ಮಾಹಿತಿ ಹಾಗೂ ದತ್ತಾಂಶ ನಮೂದು ಪ್ರಕ್ರಿಯೆ ಡಿ.7ಕ್ಕೆ ಪೂರ್ಣಗೊಂಡಿತು.</p>.<p>1961 ಮನೆಗಳಿಗೆ ಅನುಮೋದನೆ: ಜಿಲ್ಲೆಯಲ್ಲಿ ಭಾರಿ ಮಳೆಗೆ ಹೇರಳ ಸಂಖ್ಯೆಯ ಮನೆಗಳಿಗೆ ಹಾನಿಯಾಗಿದೆ. 1,972 ಮನೆಗಳಿಗೆ ಹಾನಿಯಾಗಿದೆ ಎಂದು ಆಯಾ ತಹಶೀಲ್ದಾರರು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ಇವುಗಳಲ್ಲಿ 1,961 ಮನೆಗಳಿಗೆ ಜಿಲ್ಲಾಧಿಕಾರಿ ಅನುಮೋದನೆ ಕೊಟ್ಟಿದ್ದರು. ಮನೆಗಳ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಒಟ್ಟು ₹ 14.72 ಕೋಟಿ ಬಿಡುಗಡೆ ಮಾಡಬೇಕಾಗಿದ್ದು ₹ 12.28 ಕೋಟಿಯನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ. ಶೇ 83ರಷ್ಟು ಹಣವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ.</p>.<p>2020 ಮತ್ತು 2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮನೆಗಳಿಗೆ ಹಾನಿ ಸಂಭವಿಸಿರಲಿಲ್ಲ. ಆದರೆ 2021ರಲ್ಲಿ ಸುರಿದ ಮಳೆ ಸಾವಿರಾರು ಮನೆಗಳಿಗೆ ಹಾನಿ ಮಾಡಿದೆ.</p>.<p>ಮೂಲಸೌಕರ್ಯಕ್ಕೆ ಹಾನಿ:ಮಳೆ ಬೆಳೆಗಷ್ಟೇ ಹಾನಿ ಮಾಡಿಲ್ಲ. ಜಿಲ್ಲೆಯಲ್ಲಿ ಮೂಲಸೌಕರ್ಯಗಳಿಗೂ ಹೆಚ್ಚಿನ ಹಾನಿಯನ್ನು ಮಾಡಿದೆ. ಒಟ್ಟು ₹ 185.75 ಲಕ್ಷ ಮೊತ್ತದ ಹಾನಿ ಸಂಭವಿಸಿದೆ.</p>.<p>***</p>.<p>ಅಂಕಿ ಅಂಶ</p>.<p>1,972<br />ಮಳೆಯಿಂದ ಹಾನಿಗೆ ಒಳಗಾಗಿರುವ ಮನೆಗಳ ಸಂಖ್ಯೆ</p>.<p>₹ 35.75 ಕೋಟಿ<br />ಬಿಡುಗಡೆಯಾಗಿರುವ ಬೆಳೆ ಪರಿಹಾರದ ಹಣ</p>.<p>₹185.75 ಲಕ್ಷ<br />ಪ್ರವಾಹದಿಂದ ಮೂಲಸೌಕರ್ಯಕ್ಕಾದ ಹಾನಿಯ ಮೊತ್ತ</p>.<p>₹ 843.14 ಲಕ್ಷ<br />ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿರುವ ಅನುದಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>