<p><strong>ಬಾಗೇಪಲ್ಲಿ:</strong> ತಾಲ್ಲೂಕಿನಲ್ಲಿ ಸತತವಾಗಿ 3 ದಿನಗಳಿಂದ ಬಿದ್ದ ಭಾರಿ ಮಳೆಗೆ ತಾಲ್ಲೂಕಿನ ಕಮ್ಮರವಾರಿಪಲ್ಲಿ ಗ್ರಾಮದ ರೈತ ಮಹಿಳೆ ಕೆ.ಎನ್.ಈಶ್ವರಮ್ಮ, ರೈತ ಗೋವಿಂದಪ್ಪ ಬೆಳೆದ ಟೊಮೆಟೊ ಹಾಗೂ ಕ್ಯಾರೆಟ್ ಬೆಳೆ ಸಂಪೂರ್ಣ ನೆಲಕಚ್ಚಿದೆ.</p>.<p>ರೈತ ಮಹಿಳೆ ಈಶ್ವರಮ್ಮ, ರೈತ ಗೋವಿಂದಪ್ಪ 2 ಎಕರೆಯಲ್ಲಿ ಕ್ಯಾರೆಟ್ ಹಾಗೂ ಒಂದೂವರೆ ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಸತತ ಮಳೆಯಿಂದ ಹೊಲ ಗದ್ದೆಗಳಲ್ಲಿ ನೀರು ಸಂಗ್ರಹ ಆಗಿದೆ. ತೇವಾಂಶ ಆಗಿ ಕಟಾವು ಹಂತದ ಕ್ಯಾರೆಟ್ ನೆಲಕಚ್ಚಿದೆ. ಟೊಮೆಟೊ ಬೆಳೆಯು ಸಂಪೂರ್ಣವಾಗಿ ನೆಲಕ್ಕೆ ಕುಸಿದಿವೆ.</p>.<p>ಕೈಗೆ ಬಂದದ್ದು ಬಾಯಿಗೆ ಬರದಂತೆ ಆಗಿದೆ ಎಂದು ಪಿ.ಎನ್.ಈಶ್ವರಮ್ಮ ಪ್ರತಿಕ್ರಿಯಿಸಿದರು.</p>.<p><strong>ಮಂಗಳವಾರವೂ ಸತತ ಮಳೆ:</strong> </p><p>ತಾಲ್ಲೂಕಿನ ಕಸಬಾ, ಮಿಟ್ಟೇಮರಿ, ಗೂಳೂರು ಹೋಬಳಿಗಳ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಅರ್ಧ ಗಂಟೆ ಧಾರಾಕಾರ ಮಳೆ ಆಗಿದೆ. ಮಳೆ, ಚರಂಡಿಯ ನೀರು ರಸ್ತೆಗೆ ಹರಿಯಿತು. ಗ್ರಾಮೀಣ ರಸ್ತೆಗಳು ಕೆಸರುಮಯ ಆಗಿತ್ತು. ಬೀದಿಬದಿ ವ್ಯಾಪಾರಕ್ಕೆ ಹಾಗೂ ಜನರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು.</p>.<p>ಪಟ್ಟಣದ ಮುಖ್ಯರಸ್ತೆ, ವಾಲ್ಮೀಕಿ, ಅಂಬೇಡ್ಕರ್ ನಗರ ಸೇರಿದಂತೆ ಬೀದಿಗಳ ರಸ್ತೆಗಳು, ತಗ್ಗಿನ ಪ್ರದೇಶಗಳು ಜಲಾವೃತಗೊಂಡವು. ಕಲುಷಿತ ಮಳೆಯ ನೀರು ಮನೆಗಳಿಗೆ ನುಗ್ಗಿದೆ. ಮಹಿಳೆಯರು, ಮಕ್ಕಳು ನೀರನ್ನು ಹೊರಗೆ ಹಾಕಲು ಪ್ರಯಾಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ತಾಲ್ಲೂಕಿನಲ್ಲಿ ಸತತವಾಗಿ 3 ದಿನಗಳಿಂದ ಬಿದ್ದ ಭಾರಿ ಮಳೆಗೆ ತಾಲ್ಲೂಕಿನ ಕಮ್ಮರವಾರಿಪಲ್ಲಿ ಗ್ರಾಮದ ರೈತ ಮಹಿಳೆ ಕೆ.ಎನ್.ಈಶ್ವರಮ್ಮ, ರೈತ ಗೋವಿಂದಪ್ಪ ಬೆಳೆದ ಟೊಮೆಟೊ ಹಾಗೂ ಕ್ಯಾರೆಟ್ ಬೆಳೆ ಸಂಪೂರ್ಣ ನೆಲಕಚ್ಚಿದೆ.</p>.<p>ರೈತ ಮಹಿಳೆ ಈಶ್ವರಮ್ಮ, ರೈತ ಗೋವಿಂದಪ್ಪ 2 ಎಕರೆಯಲ್ಲಿ ಕ್ಯಾರೆಟ್ ಹಾಗೂ ಒಂದೂವರೆ ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಸತತ ಮಳೆಯಿಂದ ಹೊಲ ಗದ್ದೆಗಳಲ್ಲಿ ನೀರು ಸಂಗ್ರಹ ಆಗಿದೆ. ತೇವಾಂಶ ಆಗಿ ಕಟಾವು ಹಂತದ ಕ್ಯಾರೆಟ್ ನೆಲಕಚ್ಚಿದೆ. ಟೊಮೆಟೊ ಬೆಳೆಯು ಸಂಪೂರ್ಣವಾಗಿ ನೆಲಕ್ಕೆ ಕುಸಿದಿವೆ.</p>.<p>ಕೈಗೆ ಬಂದದ್ದು ಬಾಯಿಗೆ ಬರದಂತೆ ಆಗಿದೆ ಎಂದು ಪಿ.ಎನ್.ಈಶ್ವರಮ್ಮ ಪ್ರತಿಕ್ರಿಯಿಸಿದರು.</p>.<p><strong>ಮಂಗಳವಾರವೂ ಸತತ ಮಳೆ:</strong> </p><p>ತಾಲ್ಲೂಕಿನ ಕಸಬಾ, ಮಿಟ್ಟೇಮರಿ, ಗೂಳೂರು ಹೋಬಳಿಗಳ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಅರ್ಧ ಗಂಟೆ ಧಾರಾಕಾರ ಮಳೆ ಆಗಿದೆ. ಮಳೆ, ಚರಂಡಿಯ ನೀರು ರಸ್ತೆಗೆ ಹರಿಯಿತು. ಗ್ರಾಮೀಣ ರಸ್ತೆಗಳು ಕೆಸರುಮಯ ಆಗಿತ್ತು. ಬೀದಿಬದಿ ವ್ಯಾಪಾರಕ್ಕೆ ಹಾಗೂ ಜನರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು.</p>.<p>ಪಟ್ಟಣದ ಮುಖ್ಯರಸ್ತೆ, ವಾಲ್ಮೀಕಿ, ಅಂಬೇಡ್ಕರ್ ನಗರ ಸೇರಿದಂತೆ ಬೀದಿಗಳ ರಸ್ತೆಗಳು, ತಗ್ಗಿನ ಪ್ರದೇಶಗಳು ಜಲಾವೃತಗೊಂಡವು. ಕಲುಷಿತ ಮಳೆಯ ನೀರು ಮನೆಗಳಿಗೆ ನುಗ್ಗಿದೆ. ಮಹಿಳೆಯರು, ಮಕ್ಕಳು ನೀರನ್ನು ಹೊರಗೆ ಹಾಕಲು ಪ್ರಯಾಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>