ಜಿಲ್ಲೆಯ ಕಂದವಾರ ಕೆರೆ, ಗೋಪಾಲಕೃಷ್ಣ ಕೆರೆ, ಮಂಚನಬೆಲೆ, ಮುಷ್ಟೂರು, ರಂಗಧಾಮನಕೆರೆ, ಜಾತವಾರ, ಕೇಶವಾರ ಕೆರೆ, ರಾಳ್ಳಕೆರೆಗಳು ತುಂಬಿ ನೀರು ಹರಿದು ಬೆಳ್ಳೂಟಿ ಕೆರೆಗೆ ಬಂದು, ಬೆಳ್ಳೂಟಿ ಕೆರೆಯೂ ಕೋಡಿ ಹರಿದಿದೆ. ಬೆಳ್ಳೂಟಿ ಕೆರೆಯಿಂದ ಕೋಡಿ ಹರಿದ ನೀರು ಮುಂದೆ ಭದ್ರನ ಕೆರೆಗೆ ಹೋಗಲು ಮಾಡಿರುವ ನಾರವಾಳ ರಾಜಕಾಲುವೆ ಒತ್ತುವರಿ ಮಾಡಲಾಗಿದೆ. ಈ ಬಗ್ಗೆ ಹಲವು ಬಾರಿ ಸುತ್ತಲಿನ ಗ್ರಾಮಸ್ಥರು ತಹಶೀಲ್ದಾರ್ ಗಮನಕ್ಕೆ ತಂದಿದ್ದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.